ಬ್ರೇಕಿಂಗ್ ನ್ಯೂಸ್
10-03-21 03:47 pm Mangalore Correspondent ಕರಾವಳಿ
ಉಳ್ಳಾಲ, ಮಾ. 10: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ಅಸಹಜ ರೀತಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಯಾರೋ ಕೊಲೆಗೈದಿರುವ ಪ್ರಬಲ ಶಂಕೆ ವ್ಯಕ್ತವಾಗಿದೆ.

ಕುಂಪಲ ಆಶ್ರಯ ಕಾಲನಿಯ ಮನೆಯಲ್ಲಿ ಘಟನೆ ನಡೆದಿದ್ದು ಸ್ಥಳೀಯ ಗಾಂಜಾ ವ್ಯಸನಿಗಳು ಯುವತಿಯನ್ನು ಕೊಲೆ ಮಾಡಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಕುಂಪಲ ಆಶ್ರಯ ಕಾಲನಿ ನಿವಾಸಿ ಪ್ರೇಕ್ಷಾ (19) ಮೃತ ದುರ್ದೈವಿ. ಎಚ್ ಪಿ ಗ್ಯಾಸ್ ಏಜನ್ಸಿಯಲ್ಲಿ ಕಾರ್ಮಿಕರಾಗಿರುವ ಚಿತ್ತಪ್ರಸಾದ್ ಮತ್ತು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ವನಿತಾ ದಂಪತಿಯ ಕಿರಿಯ ಪುತ್ರಿ ಪ್ರೇಕ್ಷಾ ಇಂದು ಮಧ್ಯಾಹ್ನ ಮನೆಯ ರೂಮಿನಲ್ಲಿ ಚೂಡಿದಾರದ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆಗೈದಿರುವ ರೀತಿ ಕಂಡುಬಂದಿದೆ. ಆದರೆ, ಬೆಡ್ ಮೇಲೆ ನಿಂತ ಭಂಗಿಯಲ್ಲಿ ಶವ ಇದ್ದು ಕೊಲೆಗೈದು ನೇತು ಹಾಕಿರುವ ಶಂಕೆ ವ್ಯಕ್ತವಾಗಿದೆ.

ತಂದೆ ಚಿತ್ತ ಪ್ರಸಾದ್ ಮತ್ತು ತಾಯಿ ಕೆಲಸಕ್ಕೆ ತೆರಳಿದ್ದು ಪ್ರೇಕ್ಷಾಳ ಅಕ್ಕ ಪ್ರತೀಕ್ಷಾ ಕಾಲೇಜಿಗೆ ತೆರಳಿದ್ದಳು. ಹೀಗಾಗಿ ತಂಗಿ ಪ್ರೇಕ್ಷಾ ಮನೆಯಲ್ಲಿ ಒಬ್ಬಳೇ ಇದ್ದಳು. ಮಧ್ಯಾಹ್ನ ಸ್ಥಳೀಯ ಮಹಿಳೆಯೋರ್ವಳಿಗೆ ಘಟನೆ ಗೊತ್ತಾಗಿದ್ದು ಪ್ರೇಕ್ಷಾ ಬಗ್ಗೆ ಆಕೆಯ ತಾಯಿಗೆ ಮಾಹಿತಿ ನೀಡಿದ್ದಾರೆ. ತಾಯಿ ಮಧ್ಯಾಹ್ನ ಮನೆಗೆ ಬಂದಾಗ ಸಾವಿನ ವಿಚಾರ ಬೆಳಕಿಗೆ ಬಂದಿದೆ.


ಸ್ಥಳೀಯರಾದ ಸೌರವ್, ಯತೀರಾಜ್, ಭವಿತ್ ಎಂಬ ಮೂವರು ಯುವಕರು ಪ್ರೇಕ್ಷಾಳ ಮನೆ ಕಡೆಗೆ ಸ್ಕೂಟರಲ್ಲಿ ಬಂದಿರುವುದನ್ನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನೋರ್ವ ಸ್ಥಳೀಯ ಯುವಕನ ಬಗ್ಗೆಯೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಭವಿತ್ ಸ್ಥಳೀಯ ಕಾಂಗ್ರೆಸ್ ಮುಖಂಡನ ಮಗನಾಗಿದ್ದು ಗಾಂಜಾ ವ್ಯಸನಿಯಾಗಿದ್ದ. ಪ್ರೇಕ್ಷಾ ರೂಪದರ್ಶಿಯಾಗಿದ್ದು ಇಂದು ಮಧ್ಯಾಹ್ನ ಪೋಟೋ ಶೂಟ್ ಗೆ ಬೆಂಗಳೂರಿಗೆ ತೆರಳುವ ಸಿದ್ದತೆಯಲ್ಲಿದ್ದಳು. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Update Report: ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
A 19-year-old girl who was a model by professional has been found dead in a suspicious way at her house in Kumpala, Ullal, Mangalore. The deceased has been identified as Preksha (19).
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm