ಬ್ರೇಕಿಂಗ್ ನ್ಯೂಸ್
10-03-21 03:47 pm Mangalore Correspondent ಕರಾವಳಿ
ಉಳ್ಳಾಲ, ಮಾ. 10: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ಅಸಹಜ ರೀತಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಯಾರೋ ಕೊಲೆಗೈದಿರುವ ಪ್ರಬಲ ಶಂಕೆ ವ್ಯಕ್ತವಾಗಿದೆ.

ಕುಂಪಲ ಆಶ್ರಯ ಕಾಲನಿಯ ಮನೆಯಲ್ಲಿ ಘಟನೆ ನಡೆದಿದ್ದು ಸ್ಥಳೀಯ ಗಾಂಜಾ ವ್ಯಸನಿಗಳು ಯುವತಿಯನ್ನು ಕೊಲೆ ಮಾಡಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಕುಂಪಲ ಆಶ್ರಯ ಕಾಲನಿ ನಿವಾಸಿ ಪ್ರೇಕ್ಷಾ (19) ಮೃತ ದುರ್ದೈವಿ. ಎಚ್ ಪಿ ಗ್ಯಾಸ್ ಏಜನ್ಸಿಯಲ್ಲಿ ಕಾರ್ಮಿಕರಾಗಿರುವ ಚಿತ್ತಪ್ರಸಾದ್ ಮತ್ತು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ವನಿತಾ ದಂಪತಿಯ ಕಿರಿಯ ಪುತ್ರಿ ಪ್ರೇಕ್ಷಾ ಇಂದು ಮಧ್ಯಾಹ್ನ ಮನೆಯ ರೂಮಿನಲ್ಲಿ ಚೂಡಿದಾರದ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆಗೈದಿರುವ ರೀತಿ ಕಂಡುಬಂದಿದೆ. ಆದರೆ, ಬೆಡ್ ಮೇಲೆ ನಿಂತ ಭಂಗಿಯಲ್ಲಿ ಶವ ಇದ್ದು ಕೊಲೆಗೈದು ನೇತು ಹಾಕಿರುವ ಶಂಕೆ ವ್ಯಕ್ತವಾಗಿದೆ.

ತಂದೆ ಚಿತ್ತ ಪ್ರಸಾದ್ ಮತ್ತು ತಾಯಿ ಕೆಲಸಕ್ಕೆ ತೆರಳಿದ್ದು ಪ್ರೇಕ್ಷಾಳ ಅಕ್ಕ ಪ್ರತೀಕ್ಷಾ ಕಾಲೇಜಿಗೆ ತೆರಳಿದ್ದಳು. ಹೀಗಾಗಿ ತಂಗಿ ಪ್ರೇಕ್ಷಾ ಮನೆಯಲ್ಲಿ ಒಬ್ಬಳೇ ಇದ್ದಳು. ಮಧ್ಯಾಹ್ನ ಸ್ಥಳೀಯ ಮಹಿಳೆಯೋರ್ವಳಿಗೆ ಘಟನೆ ಗೊತ್ತಾಗಿದ್ದು ಪ್ರೇಕ್ಷಾ ಬಗ್ಗೆ ಆಕೆಯ ತಾಯಿಗೆ ಮಾಹಿತಿ ನೀಡಿದ್ದಾರೆ. ತಾಯಿ ಮಧ್ಯಾಹ್ನ ಮನೆಗೆ ಬಂದಾಗ ಸಾವಿನ ವಿಚಾರ ಬೆಳಕಿಗೆ ಬಂದಿದೆ.


ಸ್ಥಳೀಯರಾದ ಸೌರವ್, ಯತೀರಾಜ್, ಭವಿತ್ ಎಂಬ ಮೂವರು ಯುವಕರು ಪ್ರೇಕ್ಷಾಳ ಮನೆ ಕಡೆಗೆ ಸ್ಕೂಟರಲ್ಲಿ ಬಂದಿರುವುದನ್ನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನೋರ್ವ ಸ್ಥಳೀಯ ಯುವಕನ ಬಗ್ಗೆಯೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಭವಿತ್ ಸ್ಥಳೀಯ ಕಾಂಗ್ರೆಸ್ ಮುಖಂಡನ ಮಗನಾಗಿದ್ದು ಗಾಂಜಾ ವ್ಯಸನಿಯಾಗಿದ್ದ. ಪ್ರೇಕ್ಷಾ ರೂಪದರ್ಶಿಯಾಗಿದ್ದು ಇಂದು ಮಧ್ಯಾಹ್ನ ಪೋಟೋ ಶೂಟ್ ಗೆ ಬೆಂಗಳೂರಿಗೆ ತೆರಳುವ ಸಿದ್ದತೆಯಲ್ಲಿದ್ದಳು. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Update Report: ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
A 19-year-old girl who was a model by professional has been found dead in a suspicious way at her house in Kumpala, Ullal, Mangalore. The deceased has been identified as Preksha (19).
26-03-26 12:31 pm
HK News Staffer
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
26-03-26 07:19 pm
HK News Staffer
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm