ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.
ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 08:48 pm
Mangalore Correspondent
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm