ಬ್ರೇಕಿಂಗ್ ನ್ಯೂಸ್
12-03-21 09:52 pm Udupi Correspondent ಕರಾವಳಿ
ಉಡುಪಿ, ಮಾ.12: ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರಧಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೇ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ.
ಬಡಗುತಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿರುವ ಹಟ್ಟಿಯಂಗಡಿ ಮೇಳದಿಂದ, ಕರಾವಳಿಯ ದೈವದ ಮಹಿಮೆಗೆ ಸಂಬಂಧಿಸಿದ ಯಕ್ಷಗಾನ ಪ್ರಸಂಗ ನಡೆಯುತ್ತಿತ್ತು. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿರುವ ಘಟನೆ ನಡೆದಿದೆ.


ರಂಗಸ್ಥಳ ಏರುವುದಕ್ಕೂ ಮುನ್ನ ದೈವ ಆವಾಹನೆ ಆದ ರೀತಿ ವೇಷಧಾರಿ ವರ್ತಿಸಿದ್ದು ಇದನ್ನು ಕಂಡ ದೀವಟಿಕೆ ಹಿಡಿದುಕೊಂಡಿದ್ದ ಸಹಾಯಕ ಕೂಡಲೇ ದೀವಟಿಕೆಯನ್ನು ಕಲಾವಿದ ಯೋಗಿಶ್ ಪೂಜಾರಿ ಅವರಿಂದ ಬಲವಂತವಾಗಿ ಎಳೆದು ತೆಗೆದುಕೊಂಡಿದ್ದಾರೆ. ದೀವಟಿಗೆ ಸೆಳೆದುಕೊಳ್ಳಲು ತೀವ್ರ ಕಸರತ್ತು ನಡೆಸಿದ ವೇಷಧಾರಿ ಎರಡು ಮೂರು ಸುತ್ತು ಹೊಡೆದಿದ್ದಾರೆ. ಬಳಿಕ ಇಬ್ಬರು ಸೇರಿ, ವೇಷಧಾರಿಯ ಕೈಯಿಂದ ಎಳೆದು ದೂರಕ್ಕೆ ದೂಡಿದ್ದಾರೆ.
ಈ ರೀತಿಯ ಬೆಳವಣಿಗೆ ಆಗಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿದ್ದು ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿದೆ. ದೈವವೇ ವೇಷಧಾರಿಯಲ್ಲಿ ನಿಜಕ್ಕೂ ಆವಾಹನೆ ಆಗಿತ್ತೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
A Video has gone viral on social media of how Daiva arrives upon yakshagana artist during play at udupi.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm