ಬ್ರೇಕಿಂಗ್ ನ್ಯೂಸ್
14-03-21 06:29 pm Udupi Correspondent ಕರಾವಳಿ
ಮೂಡುಬಿದ್ರೆ, ಮಾ.13: ಮೂಡುಬಿದಿರೆ ಠಾಣೆ ವ್ಯಾಪ್ತಿಯ ಕರಿಂಜೆಯ ಒಂದೇ ಮನೆಯ ತಾಯಿ, ಮಕ್ಕಳು ಸೇರಿ ಐದು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮೂಡುಬಿದಿರೆ ತಾಲೂಕಿನ ಕರಿಂಜೆಯ ಸುವರ್ಣನಗರ ನಿವಾಸಿ ಜ್ಯೋತಿ ಮಣಿ (36), ಆಕೆಯ ಮಕ್ಕಳಾದ ದೆಬೋರ (11), ಜುಡಾ ಇಮಾನ್ವೇಲ್ (10), ಎಪ್ಸಿಬಾ (8) ಹಾಗೂ ಆಕೆಯ ಅತ್ತೆ ಮನೋರಂಜಿತಂ (56) ನಾಪತ್ತೆಯಾದವರು.
ಜಯರಾಜ್ ಶೇಖರ್ ಎಂಬವರ ಪತ್ನಿ ಜ್ಯೋತಿಮಣಿ (36) ಎಂಬವರು ಮಾ.10ರಂದು ತನ್ನ ಮೂವರು ಮಕ್ಕಳು ಹಾಗೂ ಅತ್ತೆ ಮನೋರಂಜಿತಂ ಜೊತೆ ನಾಪತ್ತೆಯಾಗಿದ್ದಾರೆ. ಈ ಸಂದರ್ಭ ಇವರು ಗೋದ್ರೆಜ್ ಲಾಕರಿ ನಲ್ಲಿ ಇರಿಸಿದ್ದ ಬಂಗಾರದ ಆಭರಣ ಮತ್ತು 1.40 ಲಕ್ಷ ರೂ. ನಗದನ್ನು ತೆಗೆದುಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಮಹಿಳೆ ಪತಿಯ ಗಮನಕ್ಕೆ ಬಾರದಂತೆ ತನ್ನ ಬಂಗಾರದ ಒಡವೆಗಳನ್ನು ಫೈನಾನ್ಸ್ ನಲ್ಲಿ ಅಡಮಾನ ಇಟ್ಟಿದ್ದು ಇದರಿಂದ ಬಂದ 1.80 ಲಕ್ಷ ರೂ.ವನ್ನು ಆಕೆಯ ಸ್ನೇಹಿತನಿಗೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಸಿಟ್ಟಾದ ಪತಿ ಅಡ ಇಟ್ಟ ಒಡವೆಗಳನ್ನು ಬಿಡಿಸಿ ಬರುವಂತೆ ಪತಿ ಸೂಚಿಸಿದ ಬೆನ್ನಲ್ಲೇ ಮನೆಯಿಂದ ಪರಾರಿಯಾಗಿದ್ದಾರೆ.
ಮಹಿಳೆಯು ತನ್ನ ತವರು ಮನೆಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mother three kids and grandmother of a family go missing in Moodbidri, Mangalore. The Police are now investigating the case.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm