ಬ್ರೇಕಿಂಗ್ ನ್ಯೂಸ್
16-03-21 09:35 am Mangaluru correspondent ಕರಾವಳಿ
ಮಂಗಳೂರು, ಮಾ.15: ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೇನಪೋಯ ಡೀಮ್ಡ್ ಯುನಿವರ್ಸಿಟಿಗೆ ಒಳಪಟ್ಟ ಬಹುತೇಕ ಮೆಡಿಕಲ್ ಕಾಲೇಜು ವಿಭಾಗಗಳನ್ನು ದಿಢೀರ್ ಆಗಿ ಮುಚ್ಚಲಾಗಿದೆ.
ಈ ಬಗ್ಗೆ ಯೇನಪೋಯ ವಿವಿಯ ರಿಜಿಸ್ಟ್ರಾರ್ ಡಾ. ಗಂಗಾಧರ ಸೋಮಯಾಜಿ ಆಯಾ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ಮುಂದಿನ ಆದೇಶದ ವರೆಗೆ ಕಾಲೇಜು ಮುಚ್ಚುವಂತೆ ಸೂಚನೆ ನೀಡಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ಡೆಂಟಲ್, ನರ್ಸಿಂಗ್, ಫಿಸಿಯೋಥೆರಪಿ, ಫಾರ್ಮಸಿ ಮತ್ತು ರೀಸರ್ಚ್ ಸೆಂಟರ್, ಅಲೈಡ್ ಹೆಲ್ತ್ ಕೇರ್ ಪ್ರೊಫೆಶನಲ್, ಆಯುರ್ವೇದ ಕಾಲೇಜು, ಹೋಮಿಯೋಪತಿ ಮತ್ತು ನ್ಯಾಚುರೋಪತಿ ಕಾಲೇಜು ವಿಭಾಗವನ್ನು ಮುಚ್ಚುವಂತೆ ಆದೇಶದಲ್ಲಿ ಸೂಚನೆ ನೀಡಿದ್ದಾರೆ.

ಹೀಗಿದ್ದರೂ ಪಿಜಿ ಕಲಿಯುವ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸ್ಟಾಫ್ ಕಾಲೇಜಿಗೆ ಹಾಜರಾಗಲು ಸೂಚಿಸಲಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆಯೂ ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಯೂ ಕರ್ತವ್ಯಕ್ಕೆ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರಿಯಲಿದೆ ಎಂದು ಆದೇಶದಲ್ಲಿ ಹೇಳಿರುವ ರಿಜಿಸ್ಟ್ರಾರ್, ಆದೇಶ ಪತ್ರದಲ್ಲಿ ಕೊರೊನಾ ಸೋಂಕಿನ ಬಗ್ಗೆ ಉಲ್ಲೇಖ ಮಾಡಿಲ್ಲ. ಅದರ ಕಾರಣ ಕಾಲೇಜು ಬಂದ್ ಮಾಡುತ್ತಿದ್ದೇವೆ ಎಂದೂ ತಿಳಿಸಿಲ್ಲ.

ಮಾಹಿತಿ ಪ್ರಕಾರ ಯೇನಪೋಯ ಕಾಲೇಜಿನ ಹಾಸ್ಟೆಲಿನಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ನಿನ್ನೆ ದೃಢಪಟ್ಟಿತ್ತು. ಆದರೆ, ಇಂದು ಅತಿ ಹೆಚ್ಚು ಮಂದಿಗೆ ಸೋಂಕು ಹರಡಿರುವ ಸಾಧ್ಯತೆಯಿದ್ದು ಇಡೀ ಮೆಡಿಕಲ್ ಕಾಲೇಜನ್ನೇ ಬಂದ್ ಮಾಡಿದ್ದಾರೆ.
Health Authorities Shut Yenepoya Medical College as No of Covid cases in students spike up. It is said more than 20 students are tested positive in Yenepoya Hostel in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm