ಬ್ರೇಕಿಂಗ್ ನ್ಯೂಸ್
18-03-21 02:42 pm Mangalore Correspondent ಕರಾವಳಿ
ಮಂಗಳೂರು, ಮಾ.18: ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ದೇಶದಲ್ಲಿ 70 ಜಿಲ್ಲೆಗಳನ್ನು ಹೈರಿಸ್ಕ್ ಝೋನ್ ಎಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಪಾಯಕಾರಿ ಜಿಲ್ಲೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡವೂ ಒಳಗೊಂಡಿದೆ ಎನ್ನುವ ವಿಚಾರವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದೃಢಪಡಿಸಿದ್ದಾರೆ.
ಮಾರ್ಚ್ 1ರಿಂದ 15ರ ನಡುವೆ ಕೊರೊನಾ ರಿಪೋರ್ಟ್ ಆಗಿರುವ ಬಗ್ಗೆ ಕೇಂದ್ರ ಸರಕಾರ ಮಾಹಿತಿ ಪಡೆದಿತ್ತು. ದೇಶದ ಎಲ್ಲ ಜಿಲ್ಲೆಗಳಿಂದಲೂ ಪ್ರತಿದಿನ ವರದಿಯಾದ ಕೊರೊನಾ ಪಾಸಿಟಿವ್ ಅಂಕಿ ಅಂಶಗಳನ್ನು ಆಧರಿಸಿ, ಹೈರಿಸ್ಕ್ ಝೋನ್ ಎಂದು ಪಟ್ಟಿ ಮಾಡಲಾಗಿದೆ. ಹದಿನೈದು ದಿನಗಳಲ್ಲಿ ಕೊರೊನಾ ಸೋಂಕಿನ ಹೆಚ್ಚಳ ಆಗಿರುವುದನ್ನು ಈ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಕೇಂದ್ರ ಸರಕಾರ ಬಿಡುಗಡೆ ಮಾಡಿರುವ 70 ಜಿಲ್ಲೆಗಳು ಕರ್ನಾಟಕ, ಕೇರಳ, ಗುಜರಾತ್, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿದ್ದು ಈ ಐದು ರಾಜ್ಯಗಳಲ್ಲಿ ಹೆಚ್ಚು ನಿಗಾ ವಹಿಸಲು ಮೋದಿ ಆಯಾ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಸೂಚನೆ ನೀಡಿದ್ದರು. ಅಲ್ಲದೆ, ಪಟ್ಟಿಯಲ್ಲಿರುವ 70 ಜಿಲ್ಲೆಗಳಲ್ಲಿ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸುವಂತೆ ಸೂಚನೆ ನೀಡಿದ್ದರು.
ಕರ್ನಾಟಕದಲ್ಲಿ ದಕ್ಷಿಣ ಕನ್ನಡ ನಾಲ್ಕನೇ ಸ್ಥಾನದಲ್ಲಿದ್ದು, ಮೊದಲ ಹಂತದಲ್ಲಿ ಬೀದರ್, ಕಲ್ಬುರ್ಗಿ, ಮೈಸೂರು, ಬೆಂಗಳೂರು ಇದೆ. ಹೈ ರಿಸ್ಕ್ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ಇವೂ ಇದ್ದು, ಸಿಎಂ ಯಡಿಯೂರಪ್ಪ ಈಗಾಗ್ಲೇ ವಿಧಿಸಲಾಗಿರುವ ನಿಯಮಗಳನ್ನು ಬಿಗಿ ಗೊಳಿಸಲು ಸೂಚನೆ ನೀಡಿದ್ದಾರೆ. ಒಳಾಂಗಣದಲ್ಲಿ ನಡೆಯುವ ಯಾವುದೇ ರೀತಿಯ ಮದುವೆ, ಇನ್ನಿತರ ಸಮಾರಂಭಗಳಲ್ಲಿ 200ಕ್ಕು ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು, ಇದರ ಜೊತೆಗೆ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸೂಚನೆ ಜಿಲ್ಲಾಡಳಿತಗಳಿಗೆ ನೀಡಿದ್ದಾರೆ.
ಮಾಸ್ಕ್ ಧರಿಸದೆ ಹೊರಗೆ ತೆರಳುವಂತಿಲ್ಲ ! ಕೊರೊನಾ ತಡೆಗೆ ಸಿಎಂ ಕಠಿಣ ನಿಯಮ ಜಾರಿ
ಕೊರೊನಾ ಹರಡದಂತೆ ಎಚ್ಚರ ವಹಿಸಿ ; ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ
Covid second wave Dakshina Kannada listed for high-risk zone among India's 70 districts said DC of Mangalore Dr Rajendra Kumar.
06-06-25 05:32 pm
Bengaluru Staff
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 05:33 pm
Mangalore Correspondent
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm