ಬ್ರೇಕಿಂಗ್ ನ್ಯೂಸ್
18-03-21 03:57 pm Mangalore Correspondent ಕರಾವಳಿ
ಮಂಗಳೂರು, ಮಾ.18: ಕೇಂದ್ರ ಸರಕಾರ ದಕ್ಷಿಣ ಕನ್ನಡವನ್ನು ಹೈರಿಸ್ಕ್ ಝೋನ್ ಎಂದು ಪಟ್ಟಿ ಮಾಡಿರುವ ಬೆನ್ನಲ್ಲೇ ಕೊರೊನಾ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಗದಾ ಪ್ರಹಾರಕ್ಕೆ ಮುಂದಾಗಿದ್ದಾರೆ. ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರದ ಬಗ್ಗೆ ಜನರು ಹೆಚ್ಚು ತಲೆಕೆಡಿಸಿಕೊಳ್ಳದ ಕಾರಣ ಜಿಲ್ಲಾಧಿಕಾರಿಗಳು ಹೊಸ ರೀತಿಯ ದಂಡ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳನ್ನು ಒಳಪಡಿಸಿ ಫೀಲ್ಡಿಗೆ ಇಳಿಸಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಚಿಂತನೆ ನಡೆಸಿದ್ದಾರೆ. ಪ್ರತಿ ದಿನವೂ ಅಧಿಕಾರಿ ವರ್ಗ ಒಂದು ಗಂಟೆ ಕಾಲ ಫೀಲ್ಡಿಗೆ ತೆರಳಬೇಕು. ಬಸ್, ಇನ್ನಿತರ ವಾಹನ, ಜನನಿಬಿಡ ಪ್ರದೇಶಗಳಲ್ಲಿ ತಪಾಸಣೆ ನಡೆಸಬೇಕು. ಸಭೆ, ಸಮಾರಂಭಗಳು ನಡೆಯುವ ಹಾಲ್ ಗಳಲ್ಲಿ ಜನರು ಮಾಸ್ಕ್ ಹಾಕಿದ್ದಾರೋ, ನಿಗದಿಗಿಂತ ಹೆಚ್ಚು ಜನ ಭಾಗವಹಿಸಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ನಡೆಸಬೇಕು. ಸಾರಿಗೆ ವಾಹನಗಳಲ್ಲಿ ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದರೆ, ಚಾಲಕ, ನಿರ್ವಾಹಕನಿಗೆ ದಂಡ ವಿಧಿಸಲು ಸೂಚನೆ ನೀಡಿದ್ದಾರೆ.


ತಪಾಸಣೆ ನಡೆಸುವ ಸಂದರ್ಭದಲ್ಲಿ ಮದುವೆ ಸಮಾರಂಭದ ಹಾಲ್ ಗಳಲ್ಲಿ ಮಾರ್ಗಸೂಚಿ ಪಾಲನೆ ಆಗಿಲ್ಲದಿದ್ದರೆ, ಅದರ ಮಾಲೀಕರಿಗೆ ದಂಡ ವಿಧಿಸುವುದು. ಮಾಲ್ ಗಳಲ್ಲಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಜನ ಗುಂಪು ಕೂಡಿದ್ದರೆ ಮಾಲ್ ಮಾಲೀಕರಿಗೆ ದಂಡ ಮತ್ತು ಪ್ರಕರಣ ದಾಖಲಿಸುವುದು, ಸಿನಿಮಾ ಥಿಯೇಟರ್ ಗಳಲ್ಲಿ ಒಬ್ಬ ಮಾಸ್ಕ್ ಹಾಕಿರದೇ ಇದ್ದರೂ, ಟಾಕೀಸ್ ಮಾಲೀಕರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿದ್ದಾರೆ.

ಹೊಸ ಪ್ರಯೋಗದಲ್ಲಿ ಎಸಿಪಿ, ಡಿಸಿಪಿ ದರ್ಜೆಯ ಪೊಲೀಸ್ ಅಧಿಕಾರಿಗಳು, ಜಿಪಂ ಸಿಇಓ, ಪಾಲಿಕೆ ಕಮಿಷನರ್, ಜಿಲ್ಲಾ ಮಟ್ಟದ ಪ್ರಮುಖ ಇಲಾಖಾ ಮುಖ್ಯಸ್ಥರು ಹೀಗೆ ಐಪಿಎಸ್, ಐಎಎಸ್ ದರ್ಜೆಯ ಅಧಿಕಾರಿಗಳು ಒಳಗೊಳ್ಳಲಿದ್ದು, ಅಧಿಕಾರಿ ವರ್ಗ ದಿನದಲ್ಲಿ ಒಂದು ಗಂಟೆ ಫೀಲ್ಡಿಗೆ ತೆರಳಿ, ಕೊರೊನಾ ನಿರ್ಬಂಧ ನಿಯಮಗಳ ಕಟ್ಟುನಿಟ್ಟಿನ ಪಾಲನೆಯಾಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಸಹಕಾರ ನೀಡದಿದ್ದರೇ, ಅಧಿಕಾರಿಗಳ ಮೂಲಕವೇ ಪರೋಕ್ಷ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳು ಹೊಸ ಉಪಾಯ ಹೂಡಿದ್ದಾರೆ. ತಕ್ಷಣದಿಂದಲೇ ಅಧಿಕಾರಿಗಳು ಫೀಲ್ಡಿಗೆ ಬರಲಿದ್ದು, 15 ದಿನಗಳ ಕಾಲ ಈ ರೀತಿಯ ದಂಡ ಪ್ರಯೋಗ ನಡೆಸಲಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
Read: ಕೋವಿಡ್ ; ಹೈರಿಸ್ಕ್ ಝೋನಲ್ಲಿ ಮಂಗಳೂರು ! ದೇಶದಲ್ಲಿ 70 ಜಿಲ್ಲೆಗಳ ಪಟ್ಟಿ ಬಿಡುಗಡೆ
Mangalore DC Rajendra Kumar orders new rules to Malls and Theaters, Market places and general public to avoid Covid Second Wave.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm