ಬ್ರೇಕಿಂಗ್ ನ್ಯೂಸ್
18-03-21 11:27 pm Mangaluru correspondent ಕರಾವಳಿ
ಮಂಗಳೂರು, ಮಾ.18 : ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಸತ್ರ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ.
ಕೆಮ್ರಾಲ್ ಮುಲ್ಯೊಟ್ಟು ನಿವಾಸಿ ದಿನೇಶ್ ಶೆಟ್ಟಿ (41) ಶಿಕ್ಷೆಗೊಳಗಾದ ಆರೋಪಿ.
ಆರೋಪಿ ದಿನೇಶ್ ತನ್ನ ಪರಿಚಯದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ 2018ರ ಡಿಸೆಂಬರ್ 23ರ ರಾತ್ರಿ ಮತ್ತು 2019ರ ಜನವರಿ 6ರಂದು ಮಧ್ಯಾಹ್ನ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ಇದಾದ ಎರಡು ತಿಂಗಳ ನಂತರ ಯುವತಿ ಅನಾರೋಗ್ಯಕ್ಕೆ ಈಡಾಗಿದ್ದಾಳೆ. ಪೋಷಕರ ಜತೆ ವೈದ್ಯರ ಬಳಿ ತೆರಳಿ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿತ್ತು. ಪೋಷಕರು ಬಾಲಕಿಯನ್ನು ಈ ಬಗ್ಗೆ ವಿಚಾರಿಸಿದಾಗ ದಿನೇಶ್ ಶೆಟ್ಟಿ ಅತ್ಯಾಚಾರಗೈದಿರುವ ವಿಷಯ ಬಯಲಿಗೆ ಬಂದಿತ್ತು.
ಅಪ್ರಾಪ್ತ ಬಾಲಕಿ ನೀಡಿದ ದೂರಿನ ಆಧಾರದಲ್ಲಿ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿತ್ತು. ಮಗುವಿನ ಡಿಎನ್ಎ ಪರೀಕ್ಷೆಯಲ್ಲೂ ಆರೋಪ ದೃಢಪಟ್ಟಿತ್ತು.

ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಪ್ರಕರಣವನ್ನು ಸಮಗ್ರ ವಿಚಾರಣೆ ನಡೆಸಿದ ನಂತರ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಸಾಕ್ಷಿ ಹೇಳಿದ್ದು, 12 ದಾಖಲೆಗಳನ್ನು ಪರಿಗಣಿಸಲಾಗಿದೆ.
ಆರೋಪಿಗೆ ಐಪಿಸಿ 376 ಪ್ರಕರಣದಡಿ 7 ವರ್ಷ ಕಠಿಣ ಸಜೆ, 5ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 1 ತಿಂಗಳ ಕಠಿಣ ಸಜೆ, ಪೋಕ್ಸೋ ಪ್ರಕರಣದಡಿ 10 ವರ್ಷ ಕಠಿಣ ಸಜೆ ಮತ್ತು 50 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 2 ತಿಂಗಳು ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ. ಆರೋಪಿಯ ಬಂಧನದ ನಂತರ 2 ವರ್ಷ ನ್ಯಾಯಾಂಗ ಬಂಧನದಲ್ಲಿದ್ದು, ಈ ಅವಧಿ ಶಿಕ್ಷೆಯಲ್ಲಿ ಕಡಿತಗೊಳ್ಳಲಿದೆ. ದಂಡದ ಮೊತ್ತದಲ್ಲಿ 45 ಸಾವಿರ ರೂ.ವನ್ನು ನೊಂದ ಬಾಲಕಿಗೆ ನೀಡಬೇಕು. ಕಾನೂನು ಸೇವಾ ಪ್ರಾಧಿಕಾರದಿಂದಲೂ ಬಾಲಕಿ ಪರಿಹಾರ ಪಡೆಯಲು ಅರ್ಹರು ಎಂದು ಆದೇಶಿಸಲಾಗಿದೆ.
ಆರೋಪಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು ಮದುವೆಯಾಗಿ, ಇಬ್ಬರು ಮಕ್ಕಳು ಇದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಮೂಲ್ಕಿ ಇನ್ಸ್ಪೆಕ್ಟರ್ ಆಗಿದ್ದ ಪಿ.ಎಂ. ಸಿದ್ದರಾಜು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
Mangalore Girl cheated in the name of marriage and raped court orders 10 years imprisonment to boy. The accused has been identified as Dinesh Shetty.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm