ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.

ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm