ಬ್ರೇಕಿಂಗ್ ನ್ಯೂಸ್
20-03-21 11:10 pm Mangaluru correspondent ಕರಾವಳಿ
ಮಂಗಳೂರು, ಮಾ.20 : ಗೋವಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಶಾಲೆಯನ್ನೇ ಕೆಡವಿ ಹಾಕಿದ್ದಾರೆ. ಗೋವನ್ನು ಸಾಕುತ್ತಿದ್ದವರಿಗೂ ರಕ್ಷಣೆ ನೀಡಲು ಸಾಧ್ಯವಾಗಿಲ್ಲ. ಇವರಿಗೆ ಗೋವು ರಾಜಕೀಯ ಮಾಡುವುದಕ್ಕೆ ಮಾತ್ರ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೊರವಲಯದ ಕೆಂಜಾರಿನಲ್ಲಿ ಕಪಿಲಾ ಗೋಶಾಲೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಧ್ವಂಸ ಮಾಡಲಾಗಿದೆ. ಗೋಶಾಲೆಯಲ್ಲಿರುವ ಕರುಗಳು ಬೀದಿಗೆ ಬೀಳುವಂತಾಗಿದ್ದು ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ಬಿಜೆಪಿಯವರು ಗೋವು ರಕ್ಷಣೆಗಾಗಿ ಕಾನೂನು ತರುತ್ತಾರೆ. ಕಡಿಯುವುದನ್ನು ತಪ್ಪಿಸುವ ನೆಪದಲ್ಲಿ ರಾಜಕೀಯ ಮಾಡುತ್ತಾರೆ. ಆದರೆ ಇವರು ಅಧಿಕಾರದಲ್ಲಿರುವಾಗಲೇ ದೇಶ ಬೀಫ್ ರಫ್ತು ಮಾಡುವುದರಲ್ಲಿ ಜಗತ್ತಿಗೆ ನಂಬರ್ ವನ್ ಆಗಿದೆ. ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದರು.

ಇಲ್ಲಿನ ಸಂಸದರು, ಶಾಸಕರೆಲ್ಲ ಬಿಜೆಪಿಯವರಿದ್ದಾರೆ. ಇವರಿಗೆ ಯಾರಿಗೂ ಗೋವಿನ ಕಾಣಿಸಲಿಲ್ಲ. ಗೋವನ್ನು ಬೀದಿಗೆ ಹಾಕುವಾಗ ಇಲ್ಲಿನ ಹಿಂದು ಸಂಘಟನೆಗಳಿಗೆ ಕಣ್ಣು ಕಾಣಲಿಲ್ಲ. ಎಲ್ಲರ ಕಣ್ಣು ಕುರುಡಾಗಿತ್ತು. ಇವರಿಗೆ ಗೋವಿನ ಮೇಲೆ ನೈಜ ಪ್ರೇಮ ಇದ್ದರೆ ಗೋಶಾಲೆ ಕೆಡಹುವುದನ್ನು ತಪ್ಪಿಸಬೇಕಿತ್ತು. ಇಲ್ಲಿನ ಸಂಸದರಿಗೆ ಗೋವು ಬರೀ ರಾಜಕೀಯಕ್ಕೆ ಮಾತ್ರ. ಇವರ ಗೋ ಪ್ರೇಮ ನಕಲಿಯೆಂದು ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದರು.
ನೆಲಸಮಗೊಂಡ ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತೇನೆ ಎಂದು ಚೆಕ್ಕನ್ನು ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಯವರಿಗೆ ಇದೇ ವೇಳೆ ಹಸ್ತಾಂತರಿಸಿದರು. ಅಲ್ಲದೆ, ತನ್ನ ಸೋದರ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಕೊಡಿಸುವುದಾಗಿ ಹೇಳಿದರು.
Former MLA Mohiuddin Bava handed over a cheque of Rs 1 lac to the owner of Kapila goshala Prakash Shetty for construction of a temporary goshala.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm