ಬ್ರೇಕಿಂಗ್ ನ್ಯೂಸ್
21-03-21 09:01 pm Mangaluru correspondent ಕರಾವಳಿ
ಮಂಗಳೂರು, ಮಾ.21 : ಬಿಜೆಪಿ ಶಾಸಕರ ಅಶ್ಲೀಲ ಸಿಡಿಯ ಬಗ್ಗೆ ಸಮಗ್ರ ತನಿಖೆ ಮಾಡಲು ಎಸ್ಐಟಿ ರಚಿಸಿದ ನಾಚಿಕೆಗೇಡು ಬಿಜೆಪಿ ಸರಕಾರಕ್ಕೆ ತನ್ನದೇ ಪಕ್ಷದ ಒಬ್ಬ ಕಾರ್ಯಕರ್ತನ ಭೀಕರ ಕೊಲೆಯ ಹಿಂದಿರುವ ಸತ್ಯವನ್ನು ಬಯಲಿಗೆಳೆಯಲು, ಸಮಗ್ರ ತನಿಖೆ ನಡೆಸಲು ಎಸ್ಐಟಿ ರಚಿಸಲು ಯಾಕೆ ಅಸಾಧ್ಯ..? ಎಂದು ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಪ್ರಶ್ನೆ ಮಾಡಿದ್ದಾರೆ.
ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ಪ್ರಕರಣಕ್ಕೆ ಐದು ವರುಷ ಸಂದ ಈ ದಿನದಂದು ದೇಶಪ್ರೇಮಿ ಸಂಘಟನೆಗಳ ಒಕ್ಕೂಟ ನಡೆಸಿದ ಮೆರವಣೆಗೆ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅಕ್ರಮಗಳ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ ಕಾರಣಕ್ಕಾಗಿಯೇ ಕೊಲೆಗೀಡಾಗಿದ್ದಾರೆ. ಪೊಲೀಸ್ ಇಲಾಖೆ ಕೊಲೆಗಟುಕರನ್ನಷ್ಟೇ ಬಂಧಿಸಿದ್ದಾರೆ ಹೊರತು ಕೊಲೆಯ ಹಿಂದಿರುವ ಸೂತ್ರಧಾರಿಗಳನ್ನು ಬಂಧಿಸೋದಾಗಲಿ ಅಥವಾ ಪ್ರಕರಣವನ್ನು ಸಂಪೂರ್ಣ ಭೇದಿಸಲು ಈವರೆಗೂ ಸಾಧ್ಯವಾಗಿಲ್ಲ. ಪ್ರಕರಣದ ಸಮಗ್ರ ತನಿಖೆ ನಡೆಯಬೇಕು. ಹಾಗಾಗಿ ಉನ್ನತ ಮಟ್ಟದ ತನಿಖೆಗಾಗಿ ಎಸ್ಐಟಿ ನೇಮಕ ಆಗಬೇಕು. ಅದು ಆಗುವವರೆಗೆ ಬಾಳಿಗಾ ಸಾವಿನ ನ್ಯಾಯಕ್ಕಾಗಿ ನಡೆಯುವ ಹೋರಾಟ ಎಂದೂ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ಈ ವೇಳೆ ಡಿವೈಎಫ್ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಡಿಎಸ್ಎಸ್ ರಾಜ್ಯ ಮುಖಂಡರಾದ ಎಂ. ದೇವದಾಸ್, ಮನೋವೈದ್ಯ ಡಾ. ಪಿ.ವಿ. ಭಂಡಾರಿ , ಮಂಜುಳಾ ನಾಯಕ್, ಮಾಜಿ ಕಾರ್ಪೊರೇಟರ್ ಪ್ರಕಾಶ್ ಸಾಲ್ಯಾನ್, ಸುನಿಲ್ ಬಜಿಲಕೇರಿ, ಸುಧಾಕರ ಶೆಣೈ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಎಸ್ಎಸ್ ಜಿಲ್ಲಾ ಮುಖಂಡರಾದ ರಘು ಎಕ್ಕಾರ್, ಜೆರಾಲ್ಡ್ ಟವರ್, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್ , ಪ್ರಸಾದ್ ಬಜಿಲಕೇರಿ, ಡಾ. ಕೃಷ್ಣಪ್ಪ ಕೊಂಚಾಡಿ, ಗುಲಾಬಿ ಬಿಳಿಮಲೆ, ಆಶಾ ನಾಯಕ್, ಎರಿಕ್ ಲೋಬೋ, ಶ್ಯಾಮ್ ಸುಂದರ್ ರಾವ್, ವಾಸುದೇವ ಉಚ್ಚಿಲ, ಪ್ರಭಾಕರ ಕಾಪಿಕಾಡ್, ಬಾಳಿಗಾ ಅವರ ಸಹೋದರಿ ಅನುರಾಧ ಬಾಳಿಗ, ಹರ್ಷ ಬಾಳಿಗ ಉಪಸ್ಥಿತರಿದ್ದರು.
ಸಭೆಯನ್ನು ದೇಶಪ್ರೇಮಿ ಸಂಘಟನೆಗಳ ಸಂಚಾಲಕ ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್ ಸ್ವಾಗತಿಸಿ ನಿರ್ವಹಿಸಿದರು. ವೆಂಕಟರಮಣ ದೇವಳದ ಮುಂಭಾಗದಲ್ಲಿ ಬಾಳಿಗಾ ಸಹೋದರಿಯರು ಪ್ರಾರ್ಥಿಸುವ ಮೂಲಕ ಮೆರವಣಿಗೆ ಪ್ರಾರಂಭಗೊಂಡು ಬಾಳಿಗ ಮನೆ ವರೆಗೆ ನಡೆಯಿತು.
SIT probe should be initiated in connection to the Murder of Vinayak Baliga said Professor Narendra Nayak during the mark the 5th death anniversary of the RTI activist in Mangalore.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm