ಬ್ರೇಕಿಂಗ್ ನ್ಯೂಸ್
21-03-21 09:01 pm Mangaluru correspondent ಕರಾವಳಿ
ಮಂಗಳೂರು, ಮಾ.21 : ಬಿಜೆಪಿ ಶಾಸಕರ ಅಶ್ಲೀಲ ಸಿಡಿಯ ಬಗ್ಗೆ ಸಮಗ್ರ ತನಿಖೆ ಮಾಡಲು ಎಸ್ಐಟಿ ರಚಿಸಿದ ನಾಚಿಕೆಗೇಡು ಬಿಜೆಪಿ ಸರಕಾರಕ್ಕೆ ತನ್ನದೇ ಪಕ್ಷದ ಒಬ್ಬ ಕಾರ್ಯಕರ್ತನ ಭೀಕರ ಕೊಲೆಯ ಹಿಂದಿರುವ ಸತ್ಯವನ್ನು ಬಯಲಿಗೆಳೆಯಲು, ಸಮಗ್ರ ತನಿಖೆ ನಡೆಸಲು ಎಸ್ಐಟಿ ರಚಿಸಲು ಯಾಕೆ ಅಸಾಧ್ಯ..? ಎಂದು ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಪ್ರಶ್ನೆ ಮಾಡಿದ್ದಾರೆ.
ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ಪ್ರಕರಣಕ್ಕೆ ಐದು ವರುಷ ಸಂದ ಈ ದಿನದಂದು ದೇಶಪ್ರೇಮಿ ಸಂಘಟನೆಗಳ ಒಕ್ಕೂಟ ನಡೆಸಿದ ಮೆರವಣೆಗೆ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅಕ್ರಮಗಳ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ ಕಾರಣಕ್ಕಾಗಿಯೇ ಕೊಲೆಗೀಡಾಗಿದ್ದಾರೆ. ಪೊಲೀಸ್ ಇಲಾಖೆ ಕೊಲೆಗಟುಕರನ್ನಷ್ಟೇ ಬಂಧಿಸಿದ್ದಾರೆ ಹೊರತು ಕೊಲೆಯ ಹಿಂದಿರುವ ಸೂತ್ರಧಾರಿಗಳನ್ನು ಬಂಧಿಸೋದಾಗಲಿ ಅಥವಾ ಪ್ರಕರಣವನ್ನು ಸಂಪೂರ್ಣ ಭೇದಿಸಲು ಈವರೆಗೂ ಸಾಧ್ಯವಾಗಿಲ್ಲ. ಪ್ರಕರಣದ ಸಮಗ್ರ ತನಿಖೆ ನಡೆಯಬೇಕು. ಹಾಗಾಗಿ ಉನ್ನತ ಮಟ್ಟದ ತನಿಖೆಗಾಗಿ ಎಸ್ಐಟಿ ನೇಮಕ ಆಗಬೇಕು. ಅದು ಆಗುವವರೆಗೆ ಬಾಳಿಗಾ ಸಾವಿನ ನ್ಯಾಯಕ್ಕಾಗಿ ನಡೆಯುವ ಹೋರಾಟ ಎಂದೂ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ಈ ವೇಳೆ ಡಿವೈಎಫ್ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಡಿಎಸ್ಎಸ್ ರಾಜ್ಯ ಮುಖಂಡರಾದ ಎಂ. ದೇವದಾಸ್, ಮನೋವೈದ್ಯ ಡಾ. ಪಿ.ವಿ. ಭಂಡಾರಿ , ಮಂಜುಳಾ ನಾಯಕ್, ಮಾಜಿ ಕಾರ್ಪೊರೇಟರ್ ಪ್ರಕಾಶ್ ಸಾಲ್ಯಾನ್, ಸುನಿಲ್ ಬಜಿಲಕೇರಿ, ಸುಧಾಕರ ಶೆಣೈ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಎಸ್ಎಸ್ ಜಿಲ್ಲಾ ಮುಖಂಡರಾದ ರಘು ಎಕ್ಕಾರ್, ಜೆರಾಲ್ಡ್ ಟವರ್, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್ , ಪ್ರಸಾದ್ ಬಜಿಲಕೇರಿ, ಡಾ. ಕೃಷ್ಣಪ್ಪ ಕೊಂಚಾಡಿ, ಗುಲಾಬಿ ಬಿಳಿಮಲೆ, ಆಶಾ ನಾಯಕ್, ಎರಿಕ್ ಲೋಬೋ, ಶ್ಯಾಮ್ ಸುಂದರ್ ರಾವ್, ವಾಸುದೇವ ಉಚ್ಚಿಲ, ಪ್ರಭಾಕರ ಕಾಪಿಕಾಡ್, ಬಾಳಿಗಾ ಅವರ ಸಹೋದರಿ ಅನುರಾಧ ಬಾಳಿಗ, ಹರ್ಷ ಬಾಳಿಗ ಉಪಸ್ಥಿತರಿದ್ದರು.

ಸಭೆಯನ್ನು ದೇಶಪ್ರೇಮಿ ಸಂಘಟನೆಗಳ ಸಂಚಾಲಕ ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್ ಸ್ವಾಗತಿಸಿ ನಿರ್ವಹಿಸಿದರು. ವೆಂಕಟರಮಣ ದೇವಳದ ಮುಂಭಾಗದಲ್ಲಿ ಬಾಳಿಗಾ ಸಹೋದರಿಯರು ಪ್ರಾರ್ಥಿಸುವ ಮೂಲಕ ಮೆರವಣಿಗೆ ಪ್ರಾರಂಭಗೊಂಡು ಬಾಳಿಗ ಮನೆ ವರೆಗೆ ನಡೆಯಿತು.
SIT probe should be initiated in connection to the Murder of Vinayak Baliga said Professor Narendra Nayak during the mark the 5th death anniversary of the RTI activist in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm