ಬ್ರೇಕಿಂಗ್ ನ್ಯೂಸ್
22-03-21 09:56 am Mangaluru correspondent ಕರಾವಳಿ
ಉಳ್ಳಾಲ, ಮಾ.21: ಹೆದ್ದಾರಿಯಲ್ಲಿ ಅತಿವೇಗದಿಂದ ಧಾವಿಸುತ್ತಿದ್ದ ಇನ್ನೋವಾ ಕಾರೊಂದು ಹಸುವಿಗೆ ಬಲವಾಗಿ ಡಿಕ್ಕಿಯಾದ ಪರಿಣಾಮ ಹಸುವಿನ ಎರಡು ಕಾಲುಗಳು ಮುರಿದು ಗಂಭೀರ ಸ್ಥಿತಿಗೆ ತಲುಪಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡ ಘಟನೆ ರಾ.ಹೆ. 66 ರ ಕೊಲ್ಯದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಕೊಲ್ಯದ ದುರ್ಗಾಂಬಾ ಗ್ಯಾರೇಜ್ ಎದುರಲ್ಲಿ ಕೇರಳಕ್ಕೆ ಧಾವಿಸುತ್ತಿದ್ದ ಇನ್ನೋವಾ ಕಾರು ರಸ್ತೆ ದಾಟುತ್ತಿದ್ದ ಹಸುವಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಸ್ಟೇರಿಂಗ್ ಸೇಫ್ಟಿ ಏರ್ ಬ್ಯಾಗ್ ಓಪನ್ ಆಗಿದೆ. ಕಾರಿನಲ್ಲಿ ಕೇರಳ ಮೂಲದ ಮುಸ್ಲಿಂ ಧರ್ಮಗುರುವೊಬ್ಬರು ಇದ್ದರು. ಚಾಲಕನ ಧಾವಂತದ ಚಾಲನೆಯಿಂದಾಗಿ ಕಾರು ಹಸುವಿಗೆ ಡಿಕ್ಕಿಯಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು.
ಹಸು ಚಿಂತಾಜನಕ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವುದನ್ನ ಕಂಡ ಸ್ಥಳೀಯರು ಉದ್ರಿಕ್ತಗೊಂಡಿದ್ದಾರೆ. ಕೆಲಹೊತ್ತಿನಲ್ಲಿ ಮುಸ್ಲಿಂ ಗುಂಪು ಕೂಡ ಜಮಾವಣೆಗೊಂಡಿದ್ದು ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಹೆದ್ದಾರಿ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಜನರನ್ನು ಚದುರಿಸಿ ಸಂಚಾರ ಸುಗಮಗೊಳಿಸಿದ್ದಾರೆ.
ಗಾಯಗೊಂಡಿದ್ದ ಹಸುವನ್ನು ಸ್ಥಳೀಯರು ಮತ್ತು ಸಂಘಟನೆ ಕಾರ್ಯಕರ್ತರು ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಿದ್ದಾರೆ.
A cow was hit by a speeding Innova car at Kolya in Mangalore. The cow is said to be in a serious condition.
25-07-25 04:07 pm
Bangalore Correspondent
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
25-07-25 04:40 pm
HK News Desk
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
26-07-25 10:44 am
Mangalore Correspondent
Dharmasthala Case, SIT Meeting, Anucheth, Jit...
25-07-25 08:25 pm
DIG Anucheth Mangalore, SIT Dharmasthala: ಎಸ್...
25-07-25 06:05 pm
Udupi: ಸೊಸೈಟಿಗೆ ಅಡಿಟ್ ಮಾಡಿಕೊಡಲು ಲಂಚ ಬೇಡಿಕೆ ;...
25-07-25 02:25 pm
Terrorist Yasin Bhatkal, Mangalore: 2008ರ ಉಳ್...
24-07-25 10:26 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am