ಬ್ರೇಕಿಂಗ್ ನ್ಯೂಸ್
22-03-21 12:23 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ಹೈವೇ ರಸ್ತೆಯಲ್ಲಿ ಸ್ಕೂಟರ್ ಸವಾರ ತಿರುವು ಪಡೆಯುತ್ತಿದ್ದ ವೇಳೆ ಅತಿ ವೇಗದಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಡಿವೈಡರ್ ಹತ್ತಿ ಸ್ಕೂಟರ್ ಮೇಲೆ ಹರಿದ ಘಟನೆ ಗಡಿಭಾಗ ತಲಪಾಡಿ ಜಂಕ್ಷನ್ನಲ್ಲಿ ನಡೆದಿದೆ. ಸ್ಕೂಟರ್ ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾನೆ.


ಗಾಯಾಳುವನ್ನು ಕಾಸರಗೋಡು ಜಿಲ್ಲೆಯ ಉದ್ಯಾವರ ನಿವಾಸಿ ತುಳಸಿ ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗಡಿಭಾಗ ತಲಪಾಡಿಯಲ್ಲಿ ಸ್ಕೂಲ್ ಬಸ್ಸೊಂದು ಇನ್ನೊಂದು ರಸ್ತೆಗೆ ತಿರುವು ಪಡೆಯುವ ಯತ್ನದಲ್ಲಿದ್ದಾಗ ಕೇರಳ ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಧ್ಯಕ್ಕೆ ನುಗ್ಗಿ ಬಂದಿದೆ. ಇದೇ ವೇಳೆ, ಮತ್ತೊಂದು ರಸ್ತೆಯಿಂದ ಸ್ಕೂಟರ್ ಸವಾರ ತಿರುವು ಪಡೆಯಲು ಬಂದಿದ್ದು ಕೆಎಸ್ಸಾರ್ಟಿಸಿ ಬಸ್ ನೇರವಾಗಿ ಡಿವೈಡರ್ ಮತ್ತು ಸ್ಕೂಟರ್ ಮೇಲೆ ಹರಿದಿದೆ. ಸ್ಕೂಟರ್ ಬಸ್ಸಿನಡಿಗೆ ಸಿಲುಕಿ ಅಪ್ಪಚ್ಚಿಯಾಗಿದೆ.

ಶಾಲಾ ಬಸ್ ಚಾಲಕ ಅಜಾಗರೂಕತೆ ಚಾಲನೆಯಿಂದ ಘಟನೆ ಸಂಭವಿಸಿದೆ ಎನ್ನಲಾಗುತ್ತದೆ. ಸರಕಾರಿ ಬಸ್ ಚಾಲಕ, ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ್ದು ಆತನ ಸಮಯ ಪ್ರಜ್ಞೆಯಿಂದ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಸ್ಕೂಟರ್ ಚಾಲಕ ತುಳಸಿಯ ಎರಡೂ ಕಾಲು ಮುರಿತಕ್ಕೊಳಗಾಗಿದ್ದು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Video:
Live accident caught in CCTV of Ksrtc Bus and Scooter accident in Talapady, Mangalore
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm