ಬ್ರೇಕಿಂಗ್ ನ್ಯೂಸ್
25-03-21 04:46 pm Mangaluru correspondent ಕರಾವಳಿ
ಮಂಗಳೂರು, ಮಾ.25: ಪತಿಯನ್ನು ಅಪಹರಿಸಿ, ಮುಸ್ಲಿಂ ಯುವತಿ ಜೊತೆ ಮದುವೆ ಮಾಡಿಸಿದ್ದಾರೆ ಎಂಬ ಮಹಿಳೆಯೊಬ್ಬರ ದೂರಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಕೆಯ ಪತಿ ಒಂದಲ್ಲ, ಐವರು ಯುವತಿಯರನ್ನು ಮದುವೆಯಾಗಿದ್ದಾನೆ ಎಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ಆತನ ಹೆಸರು ಕೆ.ಎಸ್.ಗಂಗಾಧರ್ ಯಾನೆ ಅಬ್ದುಲ್ ಅನೀಸ್. ಮಂಗಳೂರಿನ ಬೋಳಾರದ ನಿವಾಸಿಯಾಗಿರುವ ಗಂಗಾಧರ್, ನಗರದಲ್ಲಿ ತರಕಾರಿ ಹೋಲ್ ಸೇಲ್ ವ್ಯವಹಾರದ ಜೊತೆಗೆ ರಿಯಲ್ ಎಸ್ಟೇಟ್ ವಹಿವಾಟನ್ನೂ ಮಾಡಿಕೊಂಡಿದ್ದ. 62 ವರ್ಷದ ಗಂಗಾಧರ್ ವಿರುದ್ಧ ಆತನ ಪತ್ನಿ ಯಶೋಧ ಪಾಂಡೇಶ್ವರ ಠಾಣೆಗೆ ದೂರು ನೀಡುತ್ತಿದ್ದಂತೆ ಆತನ ಐವರು ಹೆಂಡಿರ ನಡುವಿನ ಕಳ್ಳಾಟದ ಪ್ರವರ ಹೊರಬಿದ್ದಿದೆ.

ಆಕೆಯ ದೂರಿನಲ್ಲಿ ಪತಿ ಗಂಗಾಧರ್ ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದು ಕಳೆದ ಜನವರಿ ಬಳಿಕ ತನ್ನ ಮನೆಗೆ ಬಂದಿಲ್ಲ ಎಂದು ತಿಳಿಸಿದ್ದರು. ಅಲ್ಲದೆ, ಬಲವಂತವಾಗಿ ಪತಿಯನ್ನು ಯಾರೋ ಕರೆದೊಯ್ದು ಈ ಮದುವೆ ಮಾಡಿಸಿದ್ದಾರೆಂದು ದೂರಿದ್ದರು. ಅತ್ತ ದೂರು ಕೇಳಿಬರುತ್ತಿದ್ದಂತೆ, ಹಿಂದು ಸಂಘಟನೆಗಳು ಇದರ ಹಿಂದೆ ಲವ್ ಜಿಹಾದ್ ಜಾಲದ ಮತ್ತೊಂದು ಮುಖ ಇದೆ, ಮುಸ್ಲಿಂ ಯುವತಿಯ ಮೂಲಕ ದಾಳ ಬೀಸಿ, ಹಿಂದುವನ್ನು ಮದುವೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ವಿಷಯ ಜಾಲತಾಣದಲ್ಲಿ ಚರ್ಚೆ, ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಎಚ್ಚೆತ್ತ ಮಂಗಳೂರು ಪೊಲೀಸರು, ಗಂಗಾಧರ್ ನನ್ನು ಕರೆಸಿ ತೀವ್ರ ವಿಚಾರಣೆಗೆ ಗುರಿಪಡಿಸಿದ್ದು ತನ್ನ ನಿಜ ಕತೆಯನ್ನು ಹೇಳಿಕೊಂಡಿದ್ದಾನೆ. ಗಂಗಾಧರ್ ಮದುವೆಯಾಗಿರುವ ಮುಸ್ಲಿಂ ಯುವತಿಯ ಹೆಸರು ಸುಮಯ್ಯ. ಪುತ್ತೂರು ಮೂಲದ ಬಡ ಕುಟುಂಬದ ಯುವತಿ. ಆಕೆಯ ಗಂಡ ಮೃತಪಟ್ಟಿದ್ದು ಒಂದು ಮಗುವನ್ನು ಹೊಂದಿದ್ದಳು. ಈ ವಿಚಾರ ಅರಿತಿದ್ದ ಗಂಗಾಧರ್ ಗೆಳೆಯರಾದ ಶಬ್ಬೀರ್ ಮತ್ತು ಇಸ್ಮಾಯಿಲ್ ಸೇರಿ, ಹುಡುಗಿ ಮನೆಯವರನ್ನು ಒಪ್ಪಿಸಿದ್ದಾರೆ. ಇವರು ಮುಸ್ಲಿಂ ವ್ಯಕ್ತಿಯಾಗಿದ್ದು ಇನ್ನೂ ಮದುವೆಯಾಗಿಲ್ಲ. ಸ್ವಲ್ಪ ವಯಸ್ಸಾದ್ರೂ ಕೈಯಲ್ಲಿ ಹಣವಿದೆ ಎಂದು ನಂಬಿಕೆ ಹುಟ್ಟಿಸಿದ್ದಾರೆ.
ಮುಸ್ಲಿ ಯುವತಿಯದ್ದು ಬಡ ಕುಟುಂಬವಾಗಿದ್ದು ಹುಡುಗನಿಗೆ ವಯಸ್ಸಾದ್ರೂ ಆತನಲ್ಲಿರುವ ಹಣ ನೋಡಿ, ಮದುವೆ ಮಾಡಿಕೊಟ್ಟಿದ್ದಾರೆ. ಅವರೆದುರು ಅಬ್ದುಲ್ ಅನೀಸ್ ಆಗಿದ್ದ ಗಂಗಾಧರ್, ಮಂಗಳೂರಿನಲ್ಲಿ ಫ್ಲಾಟ್ ತೆಗೆದು ಅಲ್ಲಿ ಯುವತಿಯನ್ನು ಇರಿಸಿ, ಬಂದು ಹೋಗುತ್ತಿದ್ದ. ಈ ನಡುವೆ, ಯುವತಿಗೆ ಗಂಡನ ಚರ್ಯೆ ನೋಡಿ, ಈತ ಮುಸ್ಲಿಂ ಅಲ್ಲ ಅನ್ನುವ ಸಂಶಯ ಉಂಟಾಗಿದೆ. ಇದೇ ವೇಳೆ, ಆಕೆ ಗರ್ಭಿಣಿಯಾಗಿದ್ದು ಅದನ್ನು ಮಾತ್ರೆ ಕೊಟ್ಟು ತೆಗೆಸಿದ್ದು ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದು ಅಡ್ಮಿಟ್ ಕೂಡ ಮಾಡಿಸಿದ್ದ. ಆನಂತರ ಆಕೆಯ ಮನೆಗೆ ಹೋಗುವುದನ್ನು ಕಡಿಮೆ ಮಾಡಿದ್ದು ಇಬ್ಬರ ನಡುವೆ ಮುನಿಸು ಬೆಳೆದಿತ್ತು.

ಮೊದಲ ಪತ್ನಿ ಯಶೋಧ ಪಾಂಡೇಶ್ವರ ಠಾಣೆಗೆ ದೂರು ನೀಡಿರುವ ವಿಚಾರ ತಿಳಿಯುತ್ತಿದ್ದಂತೆ, ಸುಮಯ್ಯ ಕೂಡ ಇದೀಗ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನ್ನನ್ನು ಸುಳ್ಳು ಹೇಳಿ ಮದುವೆ ಮಾಡಿಕೊಂಡಿದ್ದಾನೆ, ತನಗೆ ಅಬಾರ್ಶನ್ ಮಾಡಿಸಿ ವಂಚಿಸಿದ್ದಾಗಿ ದೂರು ನೀಡಿದ್ದಾಳೆ. ಪೊಲೀಸರ ತನಿಖೆಯಲ್ಲಿ ಇನ್ನೊಬ್ಬ ಯುವತಿ ಸವಿತಾ ಎಂಬಾಕೆಯನ್ನೂ ಗಂಗಾಧರ್ ಮದುವೆಯಾಗಿರುವ ವಿಚಾರ ತಿಳಿದುಬಂದಿದೆ. ಆಕೆಯನ್ನು 25 ವರ್ಷಗಳ ಹಿಂದೆಯೇ ಮದುವೆಯಾಗಿದ್ದು, ಪ್ರತ್ಯೇಕವಾಗಿ ಇರಿಸಿಕೊಂಡು ನೋಡಿಕೊಂಡಿದ್ದಾನೆ. ಆಕೆಗೆ ಇಬ್ಬರು ಗಂಡು ಮತ್ತು ಒಂದು ಹೆಣ್ಣು ಮಗುವನ್ನೂ ಕರುಣಿಸಿದ್ದಾನೆ. ಮೊದಲ ಪತ್ನಿಯ ಮಕ್ಕಳು ದೊಡ್ಡವರಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಸದ್ಯಕ್ಕೆ ಮೂರು ಮದುವೆ, ಐವರು ಮಕ್ಕಳು ಮಾಡಿರುವ ವಿಚಾರ ತಿಳಿದುಬಂದಿದೆ. ಇನ್ನೂ ಎರಡು ಮದುವೆಯಾಗಿದ್ದಾನೆಂದು ಹೇಳಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಸದ್ಯಕ್ಕೆ ಗಂಗಾಧರ್ ಯಾನೆ ಅಬ್ದುಲ್ ಅನೀಸ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಇಬ್ಬರು ಗೆಳೆಯರನ್ನು ವಿಚಾರಣೆ ನಡೆಸಿದ್ದೇವೆ. ಅವರಿಬ್ಬರು ಗಂಗಾಧರ್ ಜೊತೆಗೆ ತರಕಾರಿ ವಹಿವಾಟಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರಿಗೆ ಈತನ ಮದುವೆ ಪುರಾಣ ಎಲ್ಲವೂ ಗೊತ್ತಿರುವ ಸಾಧ್ಯೆತೆಯಿದೆ, ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
ಮುಸ್ಲಿಮರಲ್ಲಿ ಕೆಲವರು ಮೂರ್ನಾಲ್ಕು ಮದುವೆಯಾಗುವುದು, ಅಲ್ಲಲ್ಲಿ ಹೆಂಡತಿಯರನ್ನು ಇಟ್ಟುಕೊಂಡು ಸಂಭಾಳಿಸುವುದನ್ನು ಕೇಳಿದ್ದೇವೆ. ಹಿಂದುವಾಗಿ ಈ ರೀತಿ ನಾಲ್ಕೈದು ಹುಡುಗಿಯರನ್ನು ಕಟ್ಟಿಕೊಂಡು ಸಂಭಾಳಿಸುತ್ತಿರುವ ವಿಚಾರ ಕರಾವಳಿಯ ಮಟ್ಟಿಗೆ ಮೊದಲ ಪ್ರಕರಣ ಇರಬೇಕು. ಐವರು ಹೆಂಡಿರನ್ನು ಕಟ್ಟಿಕೊಂಡು ಸಂಭಾಳಿಸಲು ಆತ ಅಸಾಮಾನ್ಯ ಭಂಡನೇ ಆಗಿರಬೇಕು.
Also Read: 62ರ ಪತಿಯನ್ನು ಅಪಹರಿಸಿ ಮುಸ್ಲಿಂ ಯುವತಿ ಜೊತೆ ಮದುವೆ ; ಪತ್ನಿಯಿಂದ ದೂರು !
A 62-year-old man who was kidnapped and forced to marry a Muslim girl has a new twist in the case. Gangadhar who is a Hindu by Birth got converted to Islam for the pleasure of marriage and has got five wives. The incident came to light after his wife Yashoda lodged a missing complaint at the Pandeshwar Police Station in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm