ಬ್ರೇಕಿಂಗ್ ನ್ಯೂಸ್
26-03-21 04:52 pm Mangaluru correspondent ಕರಾವಳಿ
ಮಂಗಳೂರು, ಮಾ.25: ಜನರಿಗೆ ಯಾವುದೇ ಸೂಚನೆ ನೀಡದೆ ಜಿಲ್ಲಾಧಿಕಾರಿಯವರು ಏಕಾಏಕಿ ಬೀದಿಗಿಳಿದು ದಂಡ ವಿಧಿಸಿದ್ದು ತಪ್ಪು. ಮಾಲ್, ಪಬ್ ಗಳಲ್ಲಿ ಸೇರುವ ಜನರ ಮೇಲೆ ದಂಡ ಹಾಕಲ್ಲ. ಸಾಮಾನ್ಯ ಜನರ ಮೇಲೆ ದಂಡ ವಿಧಿಸುವ, ಬಂಧಿಸುವ ಕೆಲಸ ಮಾಡುತ್ತಾರೆ. ಇದು ಎಷ್ಟು ಸರಿ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕೈಗೊಂಡಿರುವ ದಿಢೀರ್ ದಾಳಿ ಕ್ರಮವನ್ನು ಟೀಕಿಸಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕಿ, ದೊಡ್ಡ ಮಾಲ್ಗಳಲ್ಲಿ ದಾಳಿ ನಡೆಸಿ, 500 ಸಾವಿರ ದಂಡ ವಿಧಿಸಿದ್ದಾರೆ. ಸಣ್ಣ ವ್ಯಾಪಾರಸ್ಥರ ಅಂಗಡಿಗಳಿಗೆ 4-5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆಯವರು ಕೂಡ ಇದೇ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಜನರ ಮೇಲೆ ಇವರು ದಂಡದ ಪ್ರಯೋಗ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮಾಸ್ಕ್ ಧರಿಸದೇ ಇದ್ದುದಕ್ಕೆ ದಂಡ ವಿಧಿಸಲಿ. ಹಾಗೆಂದು ಮಾಸ್ಕ್ ಹಾಕದ ಕಾರಣಕ್ಕೆ ಬಂಧಿಸುವ ಅಧಿಕಾರ ಇದೆಯೇ ಇವರಿಗೆ. ಪೆಟ್ರೋಲ್ ಪಂಪಿನಲ್ಲಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ಒಬ್ಬನನ್ನು ಅಪರಾಧಿಯಂತೆ ಎಳಕೊಂಡು ಹೋಗಿದ್ದು ಎಷ್ಟು ಸರಿ ಎಂದು ಆಕ್ಷೇಪಿಸಿದ್ದಾರೆ.
ಮೊನ್ನೆ ಸುರತ್ಕಲ್ ನಲ್ಲಿ ಡಿಜೆ, ಡ್ಯಾನ್ಸ್ ಎಂದು ಬಹಳಷ್ಟು ಜನ ಸೇರಿದ್ದರು. ಕುಣಿದಾಡಿದ್ದಾರೆ. ಅದರಲ್ಲಿ ಡೀಸಿಯವರೂ ಇದ್ದರು. ಅಲ್ಲಿ ಇಲ್ಲದ ಕೊರೊನಾ ನಿಯಮ ಬೀದಿಯಲ್ಲಿ ಹೋಗೋ ಜನರ ಮೇಲೆ ಮಾತ್ರ ಯಾಕೆ ವಿಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Congress leader prathibha kulai has slammed Mangalore DC Rajendra for his audacity on poor over covid rules.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm