ಬ್ರೇಕಿಂಗ್ ನ್ಯೂಸ್
27-03-21 02:08 pm Mangaluru correspondent ಕರಾವಳಿ
ಮಂಗಳೂರು, ಮಾರ್ಚ್ 27: ಖಾಸಗಿ ಕಾರಿನ ಚಾಲಕನೊಬ್ಬ ಸಮವಸ್ತ್ರ ಧರಿಸಿಲ್ಲ ಎಂಬ ಕಾರಣಕ್ಕೆ ಬಂಟ್ವಾಳ ಪೊಲೀಸರು 500 ರೂ. ದಂಡ ವಿಧಿಸಿದ ಘಟನೆ ನಡೆದಿದ್ದು ಈ ಬಗ್ಗೆ ತಿಳಿದ ಎಸ್ಪಿ ದಂಡದ ಹಣವನ್ನು ಹಿಂತಿರುಗಿ ಕೊಡಿಸಿದ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಖಾಸಗಿ ವಾಹನದ ಚಾಲಕರು ಸಮವಸ್ತ್ರ ಹಾಕಬೇಕೆಂಬ ನಿಯಮವಿಲ್ಲ. ಬಾಡಿಗೆ ನಡೆಸುವ ಕಾರುಗಳು ಅಂದರೆ, ಯೆಲ್ಲೋ ಬೋರ್ಡ್ ನಂಬರ್ ಪ್ಲೇಟ್ ಇರುವ ವಾಹನಗಳಿಗೆ ಮಾತ್ರ ಚಾಲಕರು ಬಿಳಿ ಸಮವಸ್ತ್ರ ಧರಿಸಬೇಕೆಂಬ ನಿಯಮ ಇದೆ.
ಆದರೆ ಮಾ.23ರಂದು ಬಂಟ್ವಾಳ ಬಳಿಯ ರಾಮಲ್ಕಟ್ಟೆ ಎಂಬಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು, ಸಮವಸ್ತ್ರ ಧರಿಸದ ಕಾರಣಕ್ಕೆ ಪಾಣೆ ಮಂಗಳೂರು ಮೂಲದ ಕಾರು ಚಾಲಕರೊಬ್ಬರಿಗೆ 500 ರೂ. ದಂಡ ವಿಧಿಸಿದ್ದರು.
ಪೊಲೀಸರು ನೀಡಿದ ದಂಡದ ರಶೀದಿಯನ್ನು ನೋಡಿದ ಕಾರು ಚಾಲಕರ ಪುತ್ರ, ಅದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ಗಮನಕ್ಕೆ ತಂದಿದ್ದಾರೆ. ಈ ವೇಳೆ ಎಸ್ಪಿ ಸಮಸ್ಯೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಲ್ಲದೆ, ಪೊಲೀಸರು ಸಂಗ್ರಹಿಸಿದ್ದ ದಂಡದ ಮೊತ್ತವನ್ನು ಪೇದೆಯಲ್ಲಿ ಅದೇ ದಿನ ರಾತ್ರಿ ಹಿಂತಿರುಗಿಸಲು ಸೂಚನೆ ನೀಡಿದ್ದಾರೆ.
ಎಸ್ಪಿ ಸೂಚನೆಯಂತೆ ಪೊಲೀಸ್ ಪೇದೆ ನೇರವಾಗಿ ಖಾಸಗಿ ವಾಹನದಲ್ಲಿ ಪಾಣೆಮಂಗಳೂರಿಗೆ ನಡುರಾತ್ರಿಯಲ್ಲೇ ಬಂದು ಖಾಸಗಿ ಕಾರು ಚಾಲಕನ ಕೈಗೆ 500 ರೂ. ಹಿಂತಿರುಗಿಸಿದ್ದಾರೆ. ಪೊಲೀಸ್ ಅಧೀಕ್ಷಕರು ತುರ್ತಾಗಿ ಸ್ಪಂದಿಸಿದ ಕ್ರಮಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.
Bantwal police have charged a fine of Rs 500 from a private car driver for not wearing his uniform. The son of a car driver who saw the receipt of the fine from the police brought it to the notice of the Dakshina Kannada District Superintendent of Police, BM Lakshmiprasad, who then returned the fine amount back to the driver.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm