ಬ್ರೇಕಿಂಗ್ ನ್ಯೂಸ್
29-03-21 05:07 pm Mangalore Correspondent ಕರಾವಳಿ
ಮಂಗಳೂರು, ಮಾ.29: ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿಗೆ ರಕ್ಷಣೆ ಒದಗಿಸಬೇಕು, ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಅಲ್ಲದೆ, ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಬೆಳಕಿಗೆ ತಿಂಗಳಾದರೂ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿಯನ್ನು ಪೊಲೀಸರು ಬಂಧಿಸಿಲ್ಲ. ಆತ ಹಾದಿ ಬೀದಿಯಲ್ಲಿ ಮಾತನಾಡುವ ಜತೆಗೆ ಸಾರ್ವಜನಿಕವಾಗಿ ಓಡಾಡಿಕೊಂಡಿದ್ದಾರೆ. ಎಸ್ಐಟಿ ಯನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಸಾಕ್ಷ್ಯ ನಾಶ ಮಾಡುವ ಅನುಮಾನ ಇದೆ ಎಂದು ಆರೋಪಿಸಿದರು.

ಪ್ರಕರಣದ ಆರಂಭದಲ್ಲಿ ಮಹಿಳಾ ಆಯೋಗದ ಅಧ್ಯಕ್ಷರಿಂದಲೂ ಸಂತ್ರಸ್ತೆಗೆ ರಕ್ಷಣೆ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಅಂತಹ ಯಾವುದೇ ನೆರವು ಯುವತಿಗೆ ದೊರಕಿಲ್ಲ. ಬದಲಿಗೆ ಆಕೆಯನ್ನೇ ಆರೋಪಿಯಾಗಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಬೆಳಗಾವಿಯ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳ ಉಪ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪ್ರಸಕ್ತ ವಿದ್ಯಮಾನಗಳ ನಡುವೆ ಬಿಜೆಪಿ ಮತ್ತು ರಾಜ್ಯ ಸರಕಾರದ ನಾಯಕರು ಹತಾಶೆಗೊಂಡಿದ್ದಾರೆ. ಚುನಾವಣೆಯಲ್ಲಿ ಸಿಡಿ ಪ್ರಕರಣದಿಂದ ಹಿನ್ನಡೆಯಾಗುವುದನ್ನು ಮನಗಂಡು ತಮ್ಮ ಬೆಂಬಲಿಗರ ಮೂಲಕ ಕೆಪಿಸಿಸಿ ಅಧ್ಯಕ್ಷರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ, ಪೊಲೀಸ್ ಬೆಂಗಾವಲು ವಾಹನದ ಮೇಲೆ ಚಪ್ಪಲಿ ಎಸೆಯುವ ಪ್ರಕರಣ ನಡೆಸುತ್ತಿದ್ದಾರೆ. ಈ ರೀತಿಯ ಬೆಳವಣಿಗೆಯನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದವರು ಹೇಳಿದರು.
ಸದಾಶಿವ ಉಳ್ಳಾಲ್, ಟಿ.ಕೆ. ಸುಧೀರ್, ನೀರಜ್ಪಾಲ್, ಮುರಳೀದರ ರೈ, ಸುರೇಂದ್ರ ಕಾಂಬ್ಳಿ, ಲಾರೆನ್ಸ್ ಡಿಸೋಜಾ, ವಿಶ್ವಾಸ್ ಕುಮಾರ್ ದಾಸ್ ಉಪಸ್ಥಿತರಿದ್ದರು.
Appoint High court judge for clear investigation in sex CD scandal of Ramesh Jarkiholi stated Harish Kumar in Mangalore during the press meet held at congress office.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm