ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.


ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm