ಬ್ರೇಕಿಂಗ್ ನ್ಯೂಸ್
30-03-21 02:52 pm Mangalore Correspondent ಕರಾವಳಿ
ಮಂಗಳೂರು, ಮಾ.30: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸದಂತೆ ಸಿಎಂ ಯಡಿಯೂರಪ್ಪ ಸೂಚಿಸಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಲಂ 144-3 ಪ್ರಕಾರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೊರಡಿಸಿದ್ದಾರೆ. ತಕ್ಷಣದಿಂದಲೇ ಎಲ್ಲ ರೀತಿಯ ಧಾರ್ಮಿಕ ಆಚರಣೆ, ಸಾರ್ವಜನಿಕ ಸಮಾರಂಭಗಳು, ಉತ್ಸವಗಳನ್ನು ನಡೆಸದಂತೆ ಅನಿರ್ದಿಷ್ಟಾವಧಿಗೆ ನಿಷೇಧಿಸಿ ಆದೇಶ ಮಾಡಿದ್ದಾರೆ.

ಜನ ಸೇರುವಂತಹ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಗಿದೆ. ಇದೇ ವೇಳೆ, ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ನಡೆಸಲು ಅನುಮತಿ ನೀಡಲಾಗಿದೆ. ಹೋಳಿ, ಯುಗಾದಿ, ಗುಡ್ ಫ್ರೈಡೇ ಇನ್ನಿತರ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲೂ ಜನ ಸೇರುವಂತಿಲ್ಲ. ಇದಕ್ಕಾಗಿ ಸಾರ್ವಜನಿಕ ಮೈದಾನ, ಮಾರುಕಟ್ಟೆ ಪ್ರದೇಶಗಳನ್ನು ಬಳಸುವಂತಿಲ್ಲ. ಧಾರ್ಮಿಕ ವಿಧಿಗಳನ್ನು ಕಟ್ಟುಪಾಡಿಗಳಿಗಷ್ಟೇ ಸೀಮಿತವಾಗಿ ನಡೆಸಬೇಕು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ತಪ್ಪಿದಲ್ಲಿ ಕೋವಿಡ್ ವಿಪತ್ತು ನಿರ್ವಹಣೆ ಕಾನೂನು ಪ್ರಕಾರ ದಂಡನೆ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 144 ಸೆಕ್ಷನ್ ಅಡಿ ಮೂರನೇ ವಿಧಿಯನ್ನು ಬಳಸಿ ನಿಷೇಧ ಆದೇಶ ಮಾಡಲಾಗಿದ್ದು ಕೆಲವೊಂದು ಪ್ರಕ್ರಿಯೆಗಳಿಗೆ ಅನುಮತಿಸಿದ್ದರೆ, ಒಳಾಂಗಣ ಮತ್ತು ಹೊರಾಂಗಣದ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸಲು ಈ ಕಾಯ್ದೆಯಡಿ ಅವಕಾಶ ನೀಡಲಾಗಿದೆ.
ಎಪ್ರಿಲ್, ಮೇ ತಿಂಗಳಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಉತ್ಸವಗಳು ನಡೆಯುತ್ತಿದ್ದು, ಈ ವಿಧಿಯಡಿ ಎಲ್ಲವನ್ನೂ ನಿಷೇಧಿಸಲು ಜಿಲ್ಲಾಧಿಕಾರಿಗೆ ಅವಕಾಶ ಇರಲಿದೆ. ಮುಖ್ಯಮಂತ್ರಿ 15 ದಿನಗಳ ಕಾಲ ಸಭೆ, ಸಮಾರಂಭಗಳನ್ನು ನಿಷೇಧಿಸಿದ್ದರೆ, ಜಿಲ್ಲಾಧಿಕಾರಿ ಮುಂದಿನ ಆದೇಶದ ವರೆಗೂ ಈ ರೀತಿಯ ಕಾಯ್ದೆಯನ್ನು ಹೇರಿದ್ದಾರೆ.
As the second wave of Coronavirus is spreading, deputy commissioner (DC) Dr Rajendra K V has announced the imposition of a ban on religious gatherings and celebrations in public places in Dakshina Kannada (DK) district.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm