ಬ್ರೇಕಿಂಗ್ ನ್ಯೂಸ್
30-03-21 11:02 pm Mangaluru correspondent ಕರಾವಳಿ
ಮಂಗಳೂರು, ಮಾ.30: ಮಂಗಳೂರು ಮೂಲದ ದಂಪತಿಯನ್ನು ಅವರ ಮಗನೇ ಚೂರಿಯಿಂದ ಇರಿದು ಭೀಕರವಾಗಿ ಕೊಲೆಗೈದ ಘಟನೆ ನ್ಯೂಜಿಲಂಡ್ ದೇಶದ ಆಕ್ಲೆಂಡ್ ನಗರದಲ್ಲಿ ನಡೆದಿದೆ.
ಮೂಲತಃ ಮಂಗಳೂರಿನ ಬಲ್ಮಠ ನಿವಾಸಿಗಳಾಗಿದ್ದ ಕ್ರಿಸ್ತಿಯನ್ ದಂಪತಿ ಎಲ್ಸಿ ಬಂಗೇರ ಮತ್ತು ಆಕೆಯ ಪತಿ ಹರ್ಮನ್ ಬಂಗೇರ ಕೊಲೆಯಾದವರು. 23 ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಪುತ್ರ ಶೀಲ್ ಎಂಬಾತ ತನ್ನ ಮನೆಯಲ್ಲೇ ಕೊಲೆ ಮಾಡಿದ್ದಾನೆ. ಐದು ದಿನಗಳ ಹಿಂದೆ ಘಟನೆ ನಡೆದಿದ್ದು ಹೆತ್ತವರಿಗೆ ಚೂರಿಯಿಂದ ಇರಿದ ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಸ್ಥಳೀಯರು ಗಮನಿಸಿ, ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಎಲ್ಸಿ ಮತ್ತು ಹರ್ಮನ್ ಮಂಗಳೂರಿನವರು. ಎಲ್ಸಿಯ ತಂದೆ ಎಡ್ವರ್ಡ್ ಅಮ್ಮನ್ನ ಬಲ್ಮಠದ ಶಾಂತಿ ಕೆಥಡ್ರಲ್ ನಲ್ಲಿ ಸಂಡೇ ಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಮರ್ಕೆರಾ ಹಿಲ್ ಚರ್ಚ್ ನಲ್ಲಿ ಹಿರಿಯರಾಗಿ ಗೌರವ ಹೊಂದಿದ್ದರು.

ಹರ್ಮನ್ ಮುಂಬೈನಲ್ಲಿ ಶಾಲೆ ಒಂದರಲ್ಲಿ ಆಡಳಿತಾಧಿಕಾರಿ ಆಗಿದ್ದರು. ಮುಂಬೈನಲ್ಲಿ ಗೋದ್ರೆಜ್ ಕಂಪನಿಯಲ್ಲಿ ಉದ್ಯೋಗ ಹೊದಿದ್ದ ಎಲ್ಸೀ ಬಳಿಕ ಮದುವೆಯಾಗಿದ್ದರು. ಆನಂತರ ದಂಪತಿ ಗೋವಾದಲ್ಲಿ ನೆಲೆಸಿದ್ದರು. ಮಗನ ಉನ್ನತ ಮತ್ತು ಉತ್ತಮ ವಿದ್ಯಾಭ್ಯಾಸಕ್ಕಾಗಿ ದಂಪತಿ 2007ರಲ್ಲಿ ನ್ಯೂಜಿಲ್ಯಾಂಡ್ ತೆರಳಿದ್ದರು. 2014ರಲ್ಲಿ ಮಗ ಪದವಿ ಪಡೆದಾಗ ತೆಗೆಸ್ಕೊಂಡಿದ್ದ ಚಿತ್ರವನ್ನು ತಂದೆ ಹರ್ಮನ್ ಇತ್ತೀಚೆಗಷ್ಟೇ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದರು.
ಆದರೆ, ಮಗ ಇತ್ತೀಚಿನ ದಿನಗಳಲ್ಲಿ ಹೆತ್ತವರಿಂದ ದೂರವಿರಲು ಬಯಸಿದ್ದ. ಜೊತೆಗೆ ತನ್ನಿಚ್ಚೆಗೆ ಸರಿಕಂಡಂತೆ ವರ್ತಿಸುತ್ತಿದ್ದ. ಇದೇ ಕಾರಣಕ್ಕೆ ಹೆತ್ತವರ ಜೊತೆ ಜಗಳ ಆಗ್ತಿತ್ತು ಎನ್ನಲಾಗಿದೆ. ಇದೇ ವಿಚಾರದಲ್ಲಿ ಕಳೆದ ಶುಕ್ರವಾರ ಜಗಳ ನಡೆದಿದ್ದು ಕ್ರುದ್ಧಗೊಂಡ ಶೀಲ್ ಹೆತ್ತವರ ಮೇಲೆ ಚೂರಿಯಿಂದ ಇರಿದಿದ್ದ. ಹೆತ್ತವರು ಸತ್ತರೆಂದು ಗೊತ್ತಾಗಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈಗ ಆಕ್ಲೆಂಡ್ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
In a shocking incident Mangalorean Couple has been Murdered by their own son in Auckland, New Zealand. The deceased have been identified as Elisabeth Bangera and Herman Bangera who were residing in Balmatta, Mangalore
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm