ಬ್ರೇಕಿಂಗ್ ನ್ಯೂಸ್
31-03-21 08:23 pm Mangaluru correspondent ಕರಾವಳಿ
ಮಂಗಳೂರು, ಮಾ.31 : ಸ್ಕೂಟರಿಗೆ ಲಾರಿ ಡಿಕ್ಕಿಯಾಗಿ ಪರಾರಿಯಾದ ಘಟನೆ ಕೇರಳ ಗಡಿಭಾಗ ಮಂಜೇಶ್ವರದ ಹೆದ್ದಾರಿಯಲ್ಲಿ ನಡೆದಿದ್ದು, ಸ್ಕೂಟರ್ ಸವಾರ ನಿವೃತ್ತ ಯೋಧ, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದ ನಿವಾಸಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ನಿವಾಸಿ, ನಿವೃತ್ತ ಅರಣ್ಯ ರಕ್ಷಕ ದಾಮೋಧರ ಮತ್ತು ಲೀಲಾವತಿ ದಂಪತಿ ಪುತ್ರ ದಿನೇಶ್ ಉಪ್ಪಾರ್ (41) ಮೃತರು.
ಸೇನೆಯಲ್ಲಿ 18 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ದಿನೇಶ್ ಉಪ್ಪಾರ್ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಉದ್ಯಾವರ ಗುತ್ತು ಎಂಬಲ್ಲಿ ಜಾಗ ಖರೀದಿಸಿ ಅಲ್ಲೇ ನೆಲೆಸಿದ್ದರು. ಕುಂಬ್ಲೆಯ ಆರಿಕ್ಕಾಡಿಯ ಸುಜಾತಾ ಅವರನ್ನು ವರಿಸಿದ್ದ ದಿನೇಶ್ ದಂಪತಿಗೆ ವೈಷ್ಣವಿ ಮತ್ತು ವೈಶುಭಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಸೇನೆಯಲ್ಲಿ ಹೈದರಾಬಾದ್, ಅಸ್ಸಾಂ, ಜಮ್ಮು, ನಾಸಿಕ್, ಕೊಯಂಬತ್ತೂರು ಮೊದಲಾದೆಡೆ 18 ವರ್ಷ ಕಾಲ ಸೇವೆ ಸಲ್ಲಿಸಿದ್ದ ದಿನೇಶ್ ನಿವೃತ್ತಿಯ ಬಳಿಕ ಮಂಗಳೂರಿನ ಗ್ಯಾಸ್ ಸರಬರಾಜು ಕಂಪೆನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬುಧವಾರ ಬೆಳಗ್ಗೆ ಎಂದಿನಂತೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳಲು ಮನೆಬಿಟ್ಟು 10 ನಿಮಿಷ ಅಂತರದಲ್ಲಿ ಹಿಂದಿನಿಂದ ಬಂದಿದ್ದ ಲಾರಿ ಡಿಕ್ಕಿ ಹೊಡೆದಿತ್ತು. ಅಪಘಾತದ ಬಳಿಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದು ಪೊಲೀಸರು ತಲಪಾಡಿ ಟೋಲ್ಗೇಟ್ನಲ್ಲಿ ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧಿಸಿ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಮಕ್ಕಳಲ್ಲದೆ ಓರ್ವ ಅಣ್ಣ ರಾಜೇಶ್ ಉಪ್ಪಾರ್, ಓರ್ವ ಸಹೋದರ ಗಣೇಶ್ ಉಪ್ಪಾರ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.
In a tragic incident a resident of Belthangady died after he met with a accident in Manjeshwar. The deceased has been identified as Dinesh (41).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm