ಬ್ರೇಕಿಂಗ್ ನ್ಯೂಸ್
31-03-21 08:23 pm Mangaluru correspondent ಕರಾವಳಿ
ಮಂಗಳೂರು, ಮಾ.31 : ಸ್ಕೂಟರಿಗೆ ಲಾರಿ ಡಿಕ್ಕಿಯಾಗಿ ಪರಾರಿಯಾದ ಘಟನೆ ಕೇರಳ ಗಡಿಭಾಗ ಮಂಜೇಶ್ವರದ ಹೆದ್ದಾರಿಯಲ್ಲಿ ನಡೆದಿದ್ದು, ಸ್ಕೂಟರ್ ಸವಾರ ನಿವೃತ್ತ ಯೋಧ, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದ ನಿವಾಸಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ನಿವಾಸಿ, ನಿವೃತ್ತ ಅರಣ್ಯ ರಕ್ಷಕ ದಾಮೋಧರ ಮತ್ತು ಲೀಲಾವತಿ ದಂಪತಿ ಪುತ್ರ ದಿನೇಶ್ ಉಪ್ಪಾರ್ (41) ಮೃತರು.
ಸೇನೆಯಲ್ಲಿ 18 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ದಿನೇಶ್ ಉಪ್ಪಾರ್ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಉದ್ಯಾವರ ಗುತ್ತು ಎಂಬಲ್ಲಿ ಜಾಗ ಖರೀದಿಸಿ ಅಲ್ಲೇ ನೆಲೆಸಿದ್ದರು. ಕುಂಬ್ಲೆಯ ಆರಿಕ್ಕಾಡಿಯ ಸುಜಾತಾ ಅವರನ್ನು ವರಿಸಿದ್ದ ದಿನೇಶ್ ದಂಪತಿಗೆ ವೈಷ್ಣವಿ ಮತ್ತು ವೈಶುಭಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಸೇನೆಯಲ್ಲಿ ಹೈದರಾಬಾದ್, ಅಸ್ಸಾಂ, ಜಮ್ಮು, ನಾಸಿಕ್, ಕೊಯಂಬತ್ತೂರು ಮೊದಲಾದೆಡೆ 18 ವರ್ಷ ಕಾಲ ಸೇವೆ ಸಲ್ಲಿಸಿದ್ದ ದಿನೇಶ್ ನಿವೃತ್ತಿಯ ಬಳಿಕ ಮಂಗಳೂರಿನ ಗ್ಯಾಸ್ ಸರಬರಾಜು ಕಂಪೆನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬುಧವಾರ ಬೆಳಗ್ಗೆ ಎಂದಿನಂತೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳಲು ಮನೆಬಿಟ್ಟು 10 ನಿಮಿಷ ಅಂತರದಲ್ಲಿ ಹಿಂದಿನಿಂದ ಬಂದಿದ್ದ ಲಾರಿ ಡಿಕ್ಕಿ ಹೊಡೆದಿತ್ತು. ಅಪಘಾತದ ಬಳಿಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದು ಪೊಲೀಸರು ತಲಪಾಡಿ ಟೋಲ್ಗೇಟ್ನಲ್ಲಿ ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧಿಸಿ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಮಕ್ಕಳಲ್ಲದೆ ಓರ್ವ ಅಣ್ಣ ರಾಜೇಶ್ ಉಪ್ಪಾರ್, ಓರ್ವ ಸಹೋದರ ಗಣೇಶ್ ಉಪ್ಪಾರ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.
In a tragic incident a resident of Belthangady died after he met with a accident in Manjeshwar. The deceased has been identified as Dinesh (41).
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm