ಬ್ರೇಕಿಂಗ್ ನ್ಯೂಸ್
07-04-21 05:52 pm Mangalore Correspondent ಕರಾವಳಿ
ಉಪ್ಪಿನಂಗಡಿ, ಎ.7 ; ಪಬ್ ಜಿ ಗೇಮ್ ಮಕ್ಕಳ ಮೇಲೆ ಯಾವ ರೀತಿ ಆವರಿಸಿಕೊಳ್ಳುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಇಲ್ಲೊಬ್ಬ ಶಾಲಾ ಬಾಲಕ ಫ್ರೀ ಫಯರ್ ಗೇಮ್ ಆಡಿಕೊಂಡು ತಲೆ ಕೂದಲನ್ನು ವಿಚಿತ್ರವಾಗಿ ಕತ್ತರಿಸಿಕೊಂಡಿದ್ದಾನೆ.
ಇತ್ತೀಚೆಗೆ ಮಂಗಳೂರಿನಲ್ಲಿ ಪಬ್ ಜಿ ಗೇಮ್ ಆಟದ ಸೇಡಿನಲ್ಲಿ ಬಾಲಕನ ಕೊಲೆಯೇ ನಡೆದಿತ್ತು. ಇದೀಗ ಉಪ್ಪಿನಂಗಡಿಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಫ್ರೀ ಫಯರ್ ಗೇಮ್ನ ಟಾಸ್ಕ್ ಉದ್ದೇಶಕ್ಕೆ ತನ್ನ ತಲೆ ಕೂದಲನ್ನೇ ವಿಕಾರವಾಗಿ ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ತನ್ನ ತಲೆ ಕೂದಲನ್ನು ವಿಕಾರವಾಗಿ ಕತ್ತರಿಸಿರುವುದನ್ನು ಗಮನಿಸಿದ ಹೆತ್ತವರು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಸುಳ್ಳು ಕತೆ ಕಟ್ಟಿ, ತನ್ನ ಗೆಳೆಯರು ಹೇಳಿದಕ್ಕಾಗಿ ಹೀಗೆ ಕೂದಲು ಕತ್ತರಿಸಿದ್ದಾಗಿ ಹೇಳಿದ್ದ.

ಹೆತ್ತವರು ಮತ್ತಷ್ಟು ವಿಚಾರಿಸಿದಾಗ ಕೊನೆಗೆ ಸತ್ಯ ಬಾಯ್ಬಿಟ್ಟಿದ್ದಾನೆ. ತಾನು ಫ್ರೀ ಪೈಯರ್ ಆನ್ಲೈನ್ ಆಟದಲ್ಲಿ ಬರುವ ಟಾಸ್ಕ್ ಒಂದರಂತೆ ಮೊಬೈಲ್ ಮುಂಭಾಗದಲ್ಲಿ ತಲೆ ಕೂದಲು ಕತ್ತರಿಸಿಕೊಂಡಿದ್ದಾಗಿ ತಿಳಿಸಿದ್ದಾನೆ.
ವಿದ್ಯಾರ್ಥಿಯ ಕೃತ್ಯದಿಂದ ಕಂಗಾಲಾದ ಪೋಷಕರು, ಪೊಲೀಸರ ಗಮನಕ್ಕೆ ತಂದಿದ್ದರು. ಈ ವೇಳೆ ಇದೇ ಆಟದಲ್ಲಿ ಇನ್ನೂ ಕೆಲವು ಸಹಪಾಠಿ ಮಕ್ಕಳು ಭಾಗಿಯಾಗಿರುವುದು ಕಂಡುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪ್ಪಿನಂಗಡಿ ಪೊಲೀಸರು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿ ಆನ್ಲೈನ್ ಆಟಗಳ ಬಗ್ಗೆ ನಿಗಾ ಇರಿಸಲು ಮುಂದಾಗಿದ್ದಾರೆ. ಜೊತೆಗೆ ಪೋಷಕರು ಮಕ್ಕಳಿಗೆ ಆನ್ಲೈನ್ ತರಗತಿ ನೆಪದಲ್ಲಿ ಮೊಬೈಲ್ ನೀಡುವುದಕ್ಕೆ ನಿರ್ಬಂಧ ವಿಧಿಸಿ, ಮಕ್ಕಳ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ.
Uppinangady Pubg game free fire addiction boy accepts the task for a scary hair cut. Police have warned the parents and boy in connection to this.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm