ಬ್ರೇಕಿಂಗ್ ನ್ಯೂಸ್
08-04-21 11:49 am Mangalore Correspondent ಕರಾವಳಿ
ಮಂಗಳೂರು, ಎ.8 : ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಹೊಂಡದಲ್ಲಿದ್ದ ನೀರಿಗೆ ಬಿದ್ದು ಮುಳುಗೇಳುತ್ತಾ ಪ್ರಾಣ ಸಂಕಟದಲ್ಲಿದ್ದ ಪಾರಿವಾಳವನ್ನು ಅಗ್ನಿಶಾಮಕದಳ ಸಿಬಂದಿ ರಕ್ಷಿಸಿದ ಘಟನೆ ನಡೆದಿದೆ.
ನಗರದ ಟಿಎಂಎ ಪೈ ಸಭಾಂಗಣದ ಮುಂಭಾಗದಲ್ಲಿ ಕಟ್ಟಡ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದ ಪ್ರದೇಶದಲ್ಲಿ ಪಾರ್ಕಿಂಗ್ ಸ್ಥಳಕ್ಕೆಂದು 10-15 ಅಡಿ ಹೊಂಡ ಕೊರೆಯಲಾಗಿತ್ತು. ಬೃಹತ್ ಹೊಂಡದಲ್ಲಿ ಮಳೆಯಿಂದಾಗಿ ನೀರು ತುಂಬಿದ್ದು, ಈ ಹೊಂಡಕ್ಕೆ ನೀರು ಕುಡಿಯಲೆಂದು ಬಂದಿದ್ದ ಪಾರಿವಾಳ ಅಕಸ್ಮಾತ್ತಾಗಿ ಹೊಂಡಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಅದು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗೇಳುತ್ತಾ ಒದ್ದಾಡುತ್ತಿತ್ತು. ಇದನ್ನು ಕಂಡು ಮೇಲೆ ಹಾರುತ್ತಿದ್ದ ಹದ್ದುಗಳು ಪಾರಿವಾಳದ ಬೇಟೆಗೆ ಮುಂದಾಗಿತ್ತು.
ಪರಿಸರ ಹೋರಾಟಗಾರ ಶಶಿಧರ್ ಶೆಟ್ಟಿ ಏನೋ ಕೆಲಸ ನಿಮಿತ್ತ ಅದರ ಮುಂಭಾಗದ ಫ್ಲ್ಯಾಟ್ ಗೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಹೋಗಿದ್ದು ಪಾರಿವಾಳ ಅಪಾಯಕ್ಕೀಡಾದ ದೃಶ್ಯ ಕಂಡಿದ್ದಾರೆ. ತಕ್ಷಣ ಅವರು ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಪಾರಿವಾಳವನ್ನು ರಕ್ಷಿಸಿದ್ದಾರೆ.
ಪೂರ್ತಿ ಒದ್ದೆಯಾಗಿ ಒದ್ದಾಡುತ್ತಿದ್ದ ಪಾರಿವಾಳವನ್ನು ಸಹಜ ಸ್ಥಿತಿಗೆ ಬರುವವರೆಗೂ ಪೋಷಣೆಗಾಗಿ ಎನಿಮಲ್ ಕೇರ್ ಟ್ರಸ್ಟ್ ನ ತೌಸೀಫ್ ಅವರ ಸುಪರ್ದಿಗೆ ಒಪ್ಪಿಸಲಾಗಿದೆ. ಪಾರಿವಾಳದ ರಕ್ಷಣೆಗೆ ಅಗ್ನಿಶಾಮಕ ಸಿಬಂದಿ ಬಂದು ಕಾರ್ಯಾಚರಣೆ ನಡೆಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
Video:
In a sublime gesture of humanitarian concern, the entire fire brigade came calling after learning that a baby pigeon was facing peril to its life. A large water body has been formed in a private land where construction work is going on opposite Dr T M A Pai convention hall on M G Road in Mangalore.
25-06-25 01:09 pm
HK News Desk
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm