ಬ್ರೇಕಿಂಗ್ ನ್ಯೂಸ್
08-04-21 05:46 pm Mangalore Correspondent ಕರಾವಳಿ
ಉಳ್ಳಾಲ: ಎ.8; ತೊಕ್ಕೊಟ್ಟಿನ ಸ್ಮಾರ್ಟ್ ಪ್ಲಾನೆಟ್ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಸೆಕ್ಯುರಿಟಿ ಗಾರ್ಡ್ ಓರ್ವರಿಗೆ ಕೇರಳ ರಾಜ್ಯದ ಭಾಗ್ಯಮಿತ್ರ ಲಾಟರಿಯ ಒಂದು ಕೋಟಿ ರೂಪಾಯಿ ಬಂಪರ್ ಬಹುಮಾನ ಲಭಿಸಿದೆ.

ಮೂಲತಃ ಕೇರಳ ರಾಜ್ಯದ ಕ್ಯಾಲಿಕಟ್ ನಿವಾಸಿಯಾಗಿರುವ ಮೊಯ್ದಿನ್ ಕುಟ್ಟಿ (65) ಅವರಿಗೆ ಒಂದು ಕೋಟಿ ಬಂಪರ್ ಬಹುಮಾನ ಲಭಿಸಿದೆ. ಮೊಯ್ದಿನ್ ಕುಟ್ಟಿ ಅವರು ಕಳೆದ ಕೆಲ ವರ್ಷಗಳಿಂದ ಸ್ಮಾರ್ಟ್ ಪ್ಲಾನೆಟ್ ಕಟ್ಟಡದಲ್ಲಿ ಸೆಕ್ಯುರಿಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಅವರಿಗೆ ಕೇರಳದ ಲಾಟರಿ ತೆಗೆಯುವ ಹವ್ಯಾಸವಿದ್ದು ಕಳೆದ ವಾರ ಎಪ್ರಿಲ್ 4 ರಂದು ಡ್ರಾಗೊಳ್ಳುವ 100 ರೂಪಾಯಿ ಬೆಲೆಯ ಭಾಗ್ಯ ಮಿತ್ರ ಟಿಕೇಟನ್ನು ಕೇರಳದ ಉಪ್ಪಳದಲ್ಲಿ ಖರೀದಿಸಿದ್ದು ಒಂದು ಕೋಟಿ ರೂಪಾಯಿ ಬಂಪರ್ ಬಹುಮಾನ ಗಿಟ್ಟಿಸಿ ಕೋಟ್ಯಾಧೀಶರಾಗಿದ್ದಾರೆ. ಮೊಯ್ದಿನ್ ಕುಟ್ಟಿಗೆ ಪತ್ನಿ ಮೂವರು ಮಕ್ಕಳಿದ್ದಾರೆ. ಕೆಲಸ ಅರಸಿ ತೊಕ್ಕೊಟ್ಟಿಗೆ ಬಂದಿದ್ದ ಮೊಯ್ದಿನ್ ಕುಟ್ಟಿ ಅವರು ಸ್ಮಾರ್ಟ್ ಪ್ಲಾನೆಟ್ ಪ್ಲಾಝಾದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


500 ರೂಪಾಯಿ ಸಾಲ ಕೊಟ್ಟಿದ್ದ ಟೈಲರ್
ಕಳೆದ ಶನಿವಾರ ಮೊಯ್ದಿನ್ ಕುಟ್ಟಿ ಅವರು ಸ್ಮಾರ್ಟ್ ಪ್ಲಾನೆಟ್ ಕಟ್ಟಡದಲ್ಲಿರುವ ಒಮೇಗಾ ಟೈಲರ್ ಶಾಪ್ ಮಾಲೀಕರಾದ ರವಿ ಅವರಲ್ಲಿ 500 ರೂಪಾಯಿ ಸಾಲ ಪಡೆದು ಕೇರಳದ ಭಾಗ್ಯಮಿತ್ರ ಲಾಟರಿಯನ್ನು ಖರೀದಿಸಿದ್ದರಂತೆ. ತಾನು ಸಾಲವಾಗಿ ನೀಡಿದ ಹಣದಲ್ಲಿ ಮೊಯ್ದಿನ್ ಕುಟ್ಟಿ ಅವರಂತಹ ಬಡವನಿಗೆ ಕೋಟಿ ಬಹುಮಾನ ಬಂದ ವಿಷಯ ತಿಳಿದ ರವಿ ಅವರು ಸಂಭ್ರಮಿಸಿದ್ದು ಕುಟ್ಟಿ ಅವರನ್ನ ಅಭಿನಂದಿಸಿದ್ದಾರೆ.

ಭಾಗ್ಯಮಿತ್ರ ಲಾಟರಿಯಲ್ಲಿ 5 ಜನರಿಗೆ ತಲಾ 1 ಕೋಟಿ ಬಂಪರ್ ಬಹುಮಾನ ಲಭಿಸಿದ್ದು ಅದರಲ್ಲಿ ಮೊಯ್ದಿನ್ ಕುಟ್ಟಿ ಅವರು ಓರ್ವ ಅದೃಷ್ಟಶಾಲಿಯಾಗಿದ್ದಾರೆ.
Read: ಕೋಟಿ ಲಾಟರಿ ಕತೆಯೇ ಸುಳ್ಳು ; ಯಾಮಾರಿಸಿದ ವಾಚ್ಮನ್ ಕುಟ್ಟಿ ಪರಾರಿ !
In a big-time luck a security guard from Ullal, Mangalore has won rupees one crore Kerela lottery unexpectedly. Mohiuddin Kuti is the lucky Security Guard.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm