ಬ್ರೇಕಿಂಗ್ ನ್ಯೂಸ್
09-04-21 08:26 pm Mangaluru correspondent ಕರಾವಳಿ
ಮಂಗಳೂರು, ಎ.9 : ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ಆಲಂಗಾರು ಎಂಬಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗಿದ್ದು ಆರೋಪಿಗೆ ಶಿಕ್ಷೆ ಘೋಷಣೆ ಮಾಡಲಾಗಿದೆ.
ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರು. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ನಿವಾಸಿ ಶಶಿ ಯಾನೆ
ಶಶಿಕುಮಾರ್ (29) ಶಿಕ್ಷೆಗೆ ಒಳಗಾದ ಅಪರಾಧಿ. ಮೂಡುಬಿದಿರೆಯಲ್ಲಿ ಫೈನಾನ್ಸ್ ಒಂದರಲ್ಲಿ ಪಿಗ್ಮಿ ಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ, ತನ್ನ ದೊಡ್ಡಮ್ಮನ ಮಗಳಾದ ಅಕ್ಕನ ಮನೆಯಲ್ಲಿ ವಾಸ್ತವ್ಯವಿದ್ದ. ಅಲ್ಲಿಗೆ ಸಂಬಂಧಿಕಳಾಗಿರುವ ನೆರೆಮನೆಯ ಅಪ್ರಾಪ್ತ ಬಾಲಕಿ ಟಿವಿ ನೋಡಲು ಬರುತ್ತಿದ್ದಳು. ಆಕೆಯೊಂದಿಗೆ ಸಲುಗೆ ಬೆಳೆಸಿ, 2017ರ ನವೆಂಬರ್ನಲ್ಲಿ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಆಬಳಿಕ ಹಲವು ಬಾರಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿತ್ತು.
ಕೆಲವು ಸಮಯದ ಬಳಿಕ ಆಕೆಗೆ ವಿಪರೀತ ಸುಸ್ತು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತ. ಬಳಿಕ ಆಕೆಯನ್ನು ವಿಚಾರಿಸಿದಾಗ ಶಶಿಕುಮಾರ್ ಇದಕ್ಕೆ ಕಾರಣ ಎಂದು ಹೇಳಿದ್ದಳು. ಈ ಬಗ್ಗೆ ಆಕೆಯ ತಂದೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 2018 ಜೂ.26ರಂದು ದೂರು ನೀಡಿದ್ದರು.
ಆರೋಪಿಯನ್ನು ಬಂಧಿಸಿ ಅಂದಿನ ಇನ್ಸ್ಪೆಕ್ಟರ್ ರಾಮಚಂದ್ರ ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಯುವತಿಯ ಮಗು ಹಾಗೂ ಶಶಿಕುಮಾರ್ನ ಡಿಎನ್ಎ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪೂರಕ ವರದಿ ಬಂದಿದೆ. 13 ಮಂದಿ ಸಾಕ್ಷಿ ಹೇಳಿದ್ದರು. 25 ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ನ್ಯಾಯಾಧೀಶರಾದ ಸಾವಿತ್ರಿ ವೆಂಕಟರಮಣ ಅವರು ವಾದ- ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತದಲ್ಲಿ ೧ ಲಕ್ಷ ರು. ಸಂತ್ರಸ್ತೆಗೆ ನೀಡಬೇಕು. ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ 2 ಲಕ್ಷ ರು. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ
ಪರವಾಗಿ ಸರ್ಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು.
Mangalore Girl raped in Moodbidri court sentences 10 years jail term to accused Shashikumar (29).
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm