ಬ್ರೇಕಿಂಗ್ ನ್ಯೂಸ್
09-04-21 08:26 pm Mangaluru correspondent ಕರಾವಳಿ
ಮಂಗಳೂರು, ಎ.9 : ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ಆಲಂಗಾರು ಎಂಬಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗಿದ್ದು ಆರೋಪಿಗೆ ಶಿಕ್ಷೆ ಘೋಷಣೆ ಮಾಡಲಾಗಿದೆ.
ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರು. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ನಿವಾಸಿ ಶಶಿ ಯಾನೆ
ಶಶಿಕುಮಾರ್ (29) ಶಿಕ್ಷೆಗೆ ಒಳಗಾದ ಅಪರಾಧಿ. ಮೂಡುಬಿದಿರೆಯಲ್ಲಿ ಫೈನಾನ್ಸ್ ಒಂದರಲ್ಲಿ ಪಿಗ್ಮಿ ಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ, ತನ್ನ ದೊಡ್ಡಮ್ಮನ ಮಗಳಾದ ಅಕ್ಕನ ಮನೆಯಲ್ಲಿ ವಾಸ್ತವ್ಯವಿದ್ದ. ಅಲ್ಲಿಗೆ ಸಂಬಂಧಿಕಳಾಗಿರುವ ನೆರೆಮನೆಯ ಅಪ್ರಾಪ್ತ ಬಾಲಕಿ ಟಿವಿ ನೋಡಲು ಬರುತ್ತಿದ್ದಳು. ಆಕೆಯೊಂದಿಗೆ ಸಲುಗೆ ಬೆಳೆಸಿ, 2017ರ ನವೆಂಬರ್ನಲ್ಲಿ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಆಬಳಿಕ ಹಲವು ಬಾರಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿತ್ತು.
ಕೆಲವು ಸಮಯದ ಬಳಿಕ ಆಕೆಗೆ ವಿಪರೀತ ಸುಸ್ತು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತ. ಬಳಿಕ ಆಕೆಯನ್ನು ವಿಚಾರಿಸಿದಾಗ ಶಶಿಕುಮಾರ್ ಇದಕ್ಕೆ ಕಾರಣ ಎಂದು ಹೇಳಿದ್ದಳು. ಈ ಬಗ್ಗೆ ಆಕೆಯ ತಂದೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 2018 ಜೂ.26ರಂದು ದೂರು ನೀಡಿದ್ದರು.
ಆರೋಪಿಯನ್ನು ಬಂಧಿಸಿ ಅಂದಿನ ಇನ್ಸ್ಪೆಕ್ಟರ್ ರಾಮಚಂದ್ರ ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಯುವತಿಯ ಮಗು ಹಾಗೂ ಶಶಿಕುಮಾರ್ನ ಡಿಎನ್ಎ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪೂರಕ ವರದಿ ಬಂದಿದೆ. 13 ಮಂದಿ ಸಾಕ್ಷಿ ಹೇಳಿದ್ದರು. 25 ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ನ್ಯಾಯಾಧೀಶರಾದ ಸಾವಿತ್ರಿ ವೆಂಕಟರಮಣ ಅವರು ವಾದ- ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತದಲ್ಲಿ ೧ ಲಕ್ಷ ರು. ಸಂತ್ರಸ್ತೆಗೆ ನೀಡಬೇಕು. ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ 2 ಲಕ್ಷ ರು. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ
ಪರವಾಗಿ ಸರ್ಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು.
Mangalore Girl raped in Moodbidri court sentences 10 years jail term to accused Shashikumar (29).
06-06-25 05:32 pm
Bengaluru Staff
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 05:33 pm
Mangalore Correspondent
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm