ಬ್ರೇಕಿಂಗ್ ನ್ಯೂಸ್
09-04-21 08:36 pm Mangaluru correspondent ಕರಾವಳಿ
ಮಂಗಳೂರು, ಎ.9: ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಆರೋಪದಲ್ಲಿ ಮಂಗಳೂರು ವಿವಿಯ ಪ್ರೊಫೆಸರ್ ಜಯಶಂಕರ್ ಅವರನ್ನು ಅಮಾನತು ಮಾಡಲಾಗಿದೆ.
ಮಂಗಳೂರು ವಿವಿಯಲ್ಲಿ ಇಂದು ಸಿಂಡಿಕೇಟ್ ಸಭೆ ನಡೆದಿದ್ದು ಸಭೆಯಲ್ಲಿ ಆರೋಪಿತ ಪ್ರೊಫೆಸರ್ ಜಯಶಂಕರ್ ಅವರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಅಲ್ಲದೆ ನಿವೃತ್ತ ನ್ಯಾಯಾಧೀಶರ ಮೂಲಕ ಪ್ರಕರಣದ ತನಿಖೆ ನಡೆಸಲು ನಿರ್ಧರಿಸಲಾಗಿದೆ.

ಮಂಗಳೂರು ಅಥವಾ ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವ ವಿಚಾರದಲ್ಲಿ ಪ್ರೊ. ಜಯಶಂಕರ್, ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ ಅತ್ತಾವರ ಮೂಲಕ 17.5 ಲಕ್ಷ ರೂ. ನೀಡಿದ್ದರು. ಹಣ ಕೊಟ್ಟು ವರ್ಷ ಕಳೆದರೂ, ಕುಲಪತಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಯಶಂಕರ್ ಮಂಗಳೂರಿನ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ದೂರಿನಂತೆ ತನಿಖೆ ನಡೆಸಿದ ಪೊಲೀಸರು ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು.
ಪ್ರಕರಣ ಬೆಳಕಿಗೆ ಬರುತ್ತಲೇ ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಸರಕಾರಿ ನೌಕರನಾಗಿರುವ ಪ್ರೊಫೆಸರ್ ಅನ್ನು ಅಮಾನತುಗೊಳಿಸಬೇಕೆಂದು ಆಗ್ರಹ ಕೇಳಿಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ, ಒತ್ತಾಯವೂ ಕೇಳಿಬಂದಿತ್ತು. ಈ ನಡುವೆ, ಪ್ರೊಫೆಸರ್ ಜೈಶಂಕರ್ ಗೆ ವಿವಿಯಿಂದ ಸ್ಪಷ್ಟನೆ ಕೇಳಿ ನೋಟಿಸ್ ನೀಡಲಾಗಿತ್ತು. ನೋಟೀಸಿಗೆ ವಿವಿಯ ಕುಲಪತಿ ಪ್ರೊ. ಯಡಪಡಿತ್ತಾಯರಿಗೆ ಪ್ರೊಫೆಸರ್ ಉತ್ತರವನ್ನೂ ನೀಡಿದ್ದರು. ನೋಟೀಸಿಗೆ ನೀಡಿದ್ದ ಉತ್ತರ ಮತ್ತು ಒಟ್ಟು ಪ್ರಕರಣ ಸಿಂಡಿಕೇಟ್ ಸಭೆಯಲ್ಲಿ ಇಂದು ಚರ್ಚೆಗೆ ಬಂದಿದೆ. ಒಬ್ಬ ಗೌರವಾನ್ವಿತ ಪ್ರೊಫೆಸರ್ ಆಗಿದ್ದುಕೊಂಡು ಕುಲಪತಿಯಾಗಲು ಲಂಚ ನೀಡಿರುವುದು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಬೀತಾಗಿದ್ದಲ್ಲದೆ ಮಂಗಳೂರು ವಿವಿಯ ಗೌರವಕ್ಕೆ ಧಕ್ಕೆ ತಂದಿದ್ದಾರೆಂಬ ನೆಲೆಯಲ್ಲಿ ಅವರನ್ನು ಆರು ತಿಂಗಳ ಕಾಲ ಅಮಾನತು ಮಾಡಲು ಸಿಂಡಿಕೇಟ್ ಮಂಡಳಿ ಸಭೆ ನಿರ್ಧರಿಸಿದೆ.
Prof M Jayashanakar who had filed a cheating case against Prasad Attavar has been suspended by Managalore University Syndicate bench over bribe charges.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm