ಬ್ರೇಕಿಂಗ್ ನ್ಯೂಸ್
09-04-21 08:36 pm Mangaluru correspondent ಕರಾವಳಿ
ಮಂಗಳೂರು, ಎ.9: ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಆರೋಪದಲ್ಲಿ ಮಂಗಳೂರು ವಿವಿಯ ಪ್ರೊಫೆಸರ್ ಜಯಶಂಕರ್ ಅವರನ್ನು ಅಮಾನತು ಮಾಡಲಾಗಿದೆ.
ಮಂಗಳೂರು ವಿವಿಯಲ್ಲಿ ಇಂದು ಸಿಂಡಿಕೇಟ್ ಸಭೆ ನಡೆದಿದ್ದು ಸಭೆಯಲ್ಲಿ ಆರೋಪಿತ ಪ್ರೊಫೆಸರ್ ಜಯಶಂಕರ್ ಅವರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಅಲ್ಲದೆ ನಿವೃತ್ತ ನ್ಯಾಯಾಧೀಶರ ಮೂಲಕ ಪ್ರಕರಣದ ತನಿಖೆ ನಡೆಸಲು ನಿರ್ಧರಿಸಲಾಗಿದೆ.
ಮಂಗಳೂರು ಅಥವಾ ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವ ವಿಚಾರದಲ್ಲಿ ಪ್ರೊ. ಜಯಶಂಕರ್, ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ ಅತ್ತಾವರ ಮೂಲಕ 17.5 ಲಕ್ಷ ರೂ. ನೀಡಿದ್ದರು. ಹಣ ಕೊಟ್ಟು ವರ್ಷ ಕಳೆದರೂ, ಕುಲಪತಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಯಶಂಕರ್ ಮಂಗಳೂರಿನ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ದೂರಿನಂತೆ ತನಿಖೆ ನಡೆಸಿದ ಪೊಲೀಸರು ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು.
ಪ್ರಕರಣ ಬೆಳಕಿಗೆ ಬರುತ್ತಲೇ ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಸರಕಾರಿ ನೌಕರನಾಗಿರುವ ಪ್ರೊಫೆಸರ್ ಅನ್ನು ಅಮಾನತುಗೊಳಿಸಬೇಕೆಂದು ಆಗ್ರಹ ಕೇಳಿಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ, ಒತ್ತಾಯವೂ ಕೇಳಿಬಂದಿತ್ತು. ಈ ನಡುವೆ, ಪ್ರೊಫೆಸರ್ ಜೈಶಂಕರ್ ಗೆ ವಿವಿಯಿಂದ ಸ್ಪಷ್ಟನೆ ಕೇಳಿ ನೋಟಿಸ್ ನೀಡಲಾಗಿತ್ತು. ನೋಟೀಸಿಗೆ ವಿವಿಯ ಕುಲಪತಿ ಪ್ರೊ. ಯಡಪಡಿತ್ತಾಯರಿಗೆ ಪ್ರೊಫೆಸರ್ ಉತ್ತರವನ್ನೂ ನೀಡಿದ್ದರು. ನೋಟೀಸಿಗೆ ನೀಡಿದ್ದ ಉತ್ತರ ಮತ್ತು ಒಟ್ಟು ಪ್ರಕರಣ ಸಿಂಡಿಕೇಟ್ ಸಭೆಯಲ್ಲಿ ಇಂದು ಚರ್ಚೆಗೆ ಬಂದಿದೆ. ಒಬ್ಬ ಗೌರವಾನ್ವಿತ ಪ್ರೊಫೆಸರ್ ಆಗಿದ್ದುಕೊಂಡು ಕುಲಪತಿಯಾಗಲು ಲಂಚ ನೀಡಿರುವುದು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಬೀತಾಗಿದ್ದಲ್ಲದೆ ಮಂಗಳೂರು ವಿವಿಯ ಗೌರವಕ್ಕೆ ಧಕ್ಕೆ ತಂದಿದ್ದಾರೆಂಬ ನೆಲೆಯಲ್ಲಿ ಅವರನ್ನು ಆರು ತಿಂಗಳ ಕಾಲ ಅಮಾನತು ಮಾಡಲು ಸಿಂಡಿಕೇಟ್ ಮಂಡಳಿ ಸಭೆ ನಿರ್ಧರಿಸಿದೆ.
Prof M Jayashanakar who had filed a cheating case against Prasad Attavar has been suspended by Managalore University Syndicate bench over bribe charges.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm