ಬ್ರೇಕಿಂಗ್ ನ್ಯೂಸ್
09-04-21 09:51 pm Mangaluru correspondent ಕರಾವಳಿ
ಮಂಗಳೂರು, ಎ.9 : ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎ.10ರಿಂದ 20ರ ವರೆಗೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಕಾರ್ಖಾನೆಗಳು/ಕಂಪನಿಗಳು/ಸಂಸ್ಥೆಗಳು ಯಥಾರೀತಿಯಲ್ಲಿ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ ಸಂಬಂಧಿಸಿದ ಕಾರ್ಮಿಕರು ಕರ್ಪ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು.

ದೂರಸಂಪರ್ಕ ಮತ್ತು ಅಂತರ್ಜಾಲ ಸೇವಾ ಸಂಸ್ಥೆಗಳು ಹಾಗೂ ಮಾಹಿತಿ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿ ರಾತ್ರಿ ಪಾಳಿಯಲ್ಲಿ ಅಧಿಕೃತ ಗುರುತಿನ ಚೀಟಿ ಹೊಂದಿ ಸಂಚರಿಸಲು ಅನುಮತಿ ನೀಡಲಾಗಿದೆ.

ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು, ಸರಕು ಸಾಗಣಿಕೆ ವಾಹನಗಳು, ಹೋಮ್ ಡೆಲಿವರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ರಾತ್ರಿ ವೇಳೆಯಲ್ಲಿನ ಬಸ್, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು. ಆದೇಶ ಪಾಲಿಸದೇ ಇರುವವರ ವಿರುದ್ಧ ಕಾನೂನು ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
The deputy commissioner of DK, Dr Rajendra has issued the corona night curfew guidelines on April 9. To curb the spread of Coronavirus, a night curfew will be imposed from April 10 to April 20 from 10 p.m. to 5 a.m. The state government has imposed a night curfew from April 10 to 20 in 8 cities in the state including Bengaluru, Mangaluru, Bidar, Udupi, Kalaburagi, Manipal, Mysuru, and Tumakuru.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm