ಬ್ರೇಕಿಂಗ್ ನ್ಯೂಸ್
10-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.10: ಕರಾವಳಿಯ ಮಂಗಳೂರು, ಉಡುಪಿಯಲ್ಲಿ ನೈಟ್ ಕರ್ಫ್ಯೂ ವಿಧಿಸಿರುವುದಕ್ಕೆ ಶಾಸಕರಿಂದ ಆಕ್ಷೇಪ ವ್ಯಕ್ತವಾಗಿದೆ. ಎಪ್ರಿಲ್ ತಿಂಗಳಲ್ಲಿ ಹೆಚ್ಚಿನ ಕಡೆ ಕೋಲ, ನೇಮ, ಉತ್ಸವಗಳು ನಡೆಯುತ್ತಿರುವುದರಿಂದ ಕರಾವಳಿಯಲ್ಲಿ ನೈಟ್ ಕರ್ಫ್ಯೂ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಾಯ್ತಿ ಕೊಡಬೇಕೆಂದು ಶಾಸಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಲ್ಲದೆ, ಸಿಎಂ ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡುವುದಾಗಿ ಶಾಸಕರು ಹೇಳುತ್ತಿದ್ದಾರೆ.

ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕಳೆದ ಬಾರಿಯೂ ಕೊರೊನಾ ಕಾರಣದಿಂದ ನೇಮ, ಕೋಲಗಳಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಬಾರಿಯೂ ಅವಕಾಶ ನೀಡದಿದ್ದರೆ ಜನರು ಅಸಹನೆಗೆ ಈಡಾಗುತ್ತಾರೆ. ಕರಾವಳಿ ಭಾಗದಲ್ಲಿ ಕೋಲ, ನೇಮಗಳು ರಾತ್ರಿ ವೇಳೆ ನಡೆಯುವ ಕಾರಣ ಇದಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಕೂಡ ಈ ಬಗ್ಗೆ ಸಿಎಂ ಅವರಿಗೆ ಪತ್ರ ಬರೆದು ಧಾರ್ಮಿಕ ವಿಧಿಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ.

ಆದರೆ, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ನಾವು ರಾಜ್ಯ ಸರಕಾರದ ಸೂಚನೆಯನ್ನು ಪಾಲಿಸುತ್ತೇವೆ ಎಂದಿದ್ದಾರೆ. ರಾಜ್ಯ ಸರಕಾರದ ಗೈಡ್ ಲೈನ್ಸ್ ಪ್ರಕಾರ ಯಾವುದೇ ಧಾರ್ಮಿಕ ಕಾರ್ಯಗಳಿಗೆ ನೈಟ್ ಕರ್ಫ್ಯೂ ಅವಧಿಯಲ್ಲಿ ಅವಕಾಶ ಇರುವುದಿಲ್ಲ. ಶಾಸಕರು ಸಿಎಂ ಅವರನ್ನು ಮನವರಿಕೆ ಮಾಡಿ, ಹೊಸ ಮಾರ್ಗಸೂಚಿಯನ್ನು ಹೊರಡಿಸಿದರೆ ಅದರಂತೆ ನಡೆದುಕೊಳ್ಳುತ್ತೇವೆ. ನಾವಾಗಿಯೇ ಇದನ್ನು ಬದಲಿಸಲು ಸಾಧ್ಯವಾಗಲ್ಲ ಎಂದು ಹೇಳಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ವಿಧಿಸಲು ಈಗಾಗ್ಲೇ ಆದೇಶ ನೀಡಲಾಗಿದೆ. ಇದರಂತೆ ಯಾವುದೇ ಧಾರ್ಮಿಕ ವಿಧಿಗಳಿಗೆ, ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಅಗತ್ಯ ಕೆಲಸದ ಹೊರತಾಗಿ ಎಲ್ಲ ಜನರೂ ರಾತ್ರಿ ಹತ್ತು ಗಂಟೆಯ ನಂತರ ಮನೆ ಸೇರಿಕೊಳ್ಳಬೇಕು. ಇಲ್ಲದಿದ್ದರೆ ಪೊಲೀಸರ ಮೂಲಕ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Night curfew Mangalore Mla Vedavyas Kamath urges permission for Bhoota Kola and nema but DC Rajendra Kumar has said a big No for such religious gatherings due to Covid Guidelines.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm