ಬ್ರೇಕಿಂಗ್ ನ್ಯೂಸ್
10-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.10: ಕರಾವಳಿಯ ಮಂಗಳೂರು, ಉಡುಪಿಯಲ್ಲಿ ನೈಟ್ ಕರ್ಫ್ಯೂ ವಿಧಿಸಿರುವುದಕ್ಕೆ ಶಾಸಕರಿಂದ ಆಕ್ಷೇಪ ವ್ಯಕ್ತವಾಗಿದೆ. ಎಪ್ರಿಲ್ ತಿಂಗಳಲ್ಲಿ ಹೆಚ್ಚಿನ ಕಡೆ ಕೋಲ, ನೇಮ, ಉತ್ಸವಗಳು ನಡೆಯುತ್ತಿರುವುದರಿಂದ ಕರಾವಳಿಯಲ್ಲಿ ನೈಟ್ ಕರ್ಫ್ಯೂ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಾಯ್ತಿ ಕೊಡಬೇಕೆಂದು ಶಾಸಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಲ್ಲದೆ, ಸಿಎಂ ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡುವುದಾಗಿ ಶಾಸಕರು ಹೇಳುತ್ತಿದ್ದಾರೆ.

ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕಳೆದ ಬಾರಿಯೂ ಕೊರೊನಾ ಕಾರಣದಿಂದ ನೇಮ, ಕೋಲಗಳಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಬಾರಿಯೂ ಅವಕಾಶ ನೀಡದಿದ್ದರೆ ಜನರು ಅಸಹನೆಗೆ ಈಡಾಗುತ್ತಾರೆ. ಕರಾವಳಿ ಭಾಗದಲ್ಲಿ ಕೋಲ, ನೇಮಗಳು ರಾತ್ರಿ ವೇಳೆ ನಡೆಯುವ ಕಾರಣ ಇದಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಕೂಡ ಈ ಬಗ್ಗೆ ಸಿಎಂ ಅವರಿಗೆ ಪತ್ರ ಬರೆದು ಧಾರ್ಮಿಕ ವಿಧಿಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ.

ಆದರೆ, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ನಾವು ರಾಜ್ಯ ಸರಕಾರದ ಸೂಚನೆಯನ್ನು ಪಾಲಿಸುತ್ತೇವೆ ಎಂದಿದ್ದಾರೆ. ರಾಜ್ಯ ಸರಕಾರದ ಗೈಡ್ ಲೈನ್ಸ್ ಪ್ರಕಾರ ಯಾವುದೇ ಧಾರ್ಮಿಕ ಕಾರ್ಯಗಳಿಗೆ ನೈಟ್ ಕರ್ಫ್ಯೂ ಅವಧಿಯಲ್ಲಿ ಅವಕಾಶ ಇರುವುದಿಲ್ಲ. ಶಾಸಕರು ಸಿಎಂ ಅವರನ್ನು ಮನವರಿಕೆ ಮಾಡಿ, ಹೊಸ ಮಾರ್ಗಸೂಚಿಯನ್ನು ಹೊರಡಿಸಿದರೆ ಅದರಂತೆ ನಡೆದುಕೊಳ್ಳುತ್ತೇವೆ. ನಾವಾಗಿಯೇ ಇದನ್ನು ಬದಲಿಸಲು ಸಾಧ್ಯವಾಗಲ್ಲ ಎಂದು ಹೇಳಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ವಿಧಿಸಲು ಈಗಾಗ್ಲೇ ಆದೇಶ ನೀಡಲಾಗಿದೆ. ಇದರಂತೆ ಯಾವುದೇ ಧಾರ್ಮಿಕ ವಿಧಿಗಳಿಗೆ, ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಅಗತ್ಯ ಕೆಲಸದ ಹೊರತಾಗಿ ಎಲ್ಲ ಜನರೂ ರಾತ್ರಿ ಹತ್ತು ಗಂಟೆಯ ನಂತರ ಮನೆ ಸೇರಿಕೊಳ್ಳಬೇಕು. ಇಲ್ಲದಿದ್ದರೆ ಪೊಲೀಸರ ಮೂಲಕ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Night curfew Mangalore Mla Vedavyas Kamath urges permission for Bhoota Kola and nema but DC Rajendra Kumar has said a big No for such religious gatherings due to Covid Guidelines.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm