ಬ್ರೇಕಿಂಗ್ ನ್ಯೂಸ್
11-04-21 09:15 pm Mangaluru correspondent ಕರಾವಳಿ
ಮಂಗಳೂರು, ಎ.11: ಕೊರೊನಾ ಕಾರಣದಿಂದಾಗಿ ಜನತೆ ಆತಂಕ ಪಡುತ್ತಿರುವ ಈ ಸಂದರ್ಭದಲ್ಲಿ ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ. ಸರಕಾರದ ಮೇಲೆ ವಿಶ್ವಾಸವಿಟ್ಟು ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆ ಪರಿಹಾರವಾಗಲಿದೆ ಎಂಬ ಭರವಸೆಯೊಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಐದನೇ ದಿನಕ್ಕೆ ಮುಂದುವರೆಯುತ್ತಿರುವ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಹೊರಡುವ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ
ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಪ್ರತಿ ದಿವಸ ಸುಮಾರು 480 ವಾಹನಗಳು ಸಂಚರಿಸುತ್ತಿದ್ದು, ಪ್ರಸ್ತುತ ಮುಷ್ಕರದ ಅವಧಿಯಲ್ಲಿ ಎ. 10ರಂದು ಸುಮಾರು 140 ವಾಹನಗಳು ಬೆಂಗಳೂರು, ಮೈಸೂರು, ಧರ್ಮಸ್ಥಳ, ಹುಬ್ಬಳ್ಳಿ, ಕಾಸರಗೋಡು, ಹೈದ್ರಾಬಾದ್, ಮಧುರೈ, ಕೊಯಮತ್ತೂರು, ಮಂತ್ರಾಲಯ ಮುಂತಾದ ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸಿವೆ. ಅದೇ ರೀತಿ ಎ.11 ರಂದು ಸುಮಾರು 200 ವಾಹನಗಳಲ್ಲಿ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಾಹನಗಳನ್ನು ಕಾರ್ಯಾಚರಿಸಲು ಅಗತ್ಯ ಯೋಜನೆಗಳನ್ನು ಮಾಡಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಪುತ್ತೂರು ವಿಭಾಗದಲ್ಲಿಯೂ ಬಸ್ ಸಂಚಾರ ಹೆಚ್ಚುತ್ತಿದ್ದು ಎ. 10ರಂದು 47 ವಾಹನಗಳು ಮತ್ತು ಎ.11ರಂದು ಸುಮಾರು 75 ವಾಹನಗಳನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಪುತ್ತೂರು, ಮಡಿಕೇರಿ ಮುಂತಾದ ಮಾರ್ಗಗಳಲ್ಲಿ ಬಿಡಲಾಗುತ್ತಿದೆ.
ಈಗಾಗಲೇ ಕರ್ತವ್ಯಕ್ಕೆ ಹಾಜರಾದ ನೌಕರರೆಲ್ಲರಿಗೆ ಅಭಿನಂದನೆ ಸಲ್ಲಿಸಿ, ಇನ್ನುಳಿದ ನೌಕರರು ಕೂಡ ಕರ್ತವ್ಯಕ್ಕೆ ಹಾಜರಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸಚಿವ ಕೋಟ ಮನವಿ ಮಾಡಿದ್ದಾರೆ.
Mangalore Kota Srinivas poojary urge kSRTC staffs to come back to duty by leaving their strike as it's causing much problems to general public.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm