ಬ್ರೇಕಿಂಗ್ ನ್ಯೂಸ್
13-04-21 09:27 pm Headline Karnataka News Network ಕರಾವಳಿ
ಮಂಗಳೂರು, ಎ.13: ಅರಬ್ಬೀ ಸಮುದ್ರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿಗೆ ಡಿಕ್ಕಿಯಾಗಿ ದುರಂತಕ್ಕೀಡಾದ ಮೀನುಗಾರಿಕೆ ಬೋಟಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೂವರು ಕಾರ್ಮಿಕರ ಮೃತದೇಹ ಪತ್ತೆಯಾಗಿದ್ದು ಉಳಿದ ಸಿಬಂದಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಸಿಂಗಾಪುರ ಮೂಲದ ಕಂಟೇನರ್ ಹಡಗು ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಸಂಚರಿಸುತ್ತಿದ್ದಾಗ ಮೀನುಗಾರಿಕಾ ಬೋಟಿಗೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಕೋಸ್ಟ್ ಗಾರ್ಡ್ ಮತ್ತು ಕಂಟೇನರ್ ಹಡಗಿನ ಸಿಬಂದಿ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಮೂವರ ಮೃತದೇಹ ಪತ್ತೆಯಾಗಿದ್ದು ಅವರನ್ನು ಪಶ್ಚಿಮ ಬಂಗಾಳ ಮೂಲದ ಅಲೆಕ್ಸಾಂಡರ್ ಸೈರಂಗ್, ಅವರ ಮಾವ ಎನ್ನಲಾಗಿರುವ ಇನ್ನೊಬ್ಬ ವ್ಯಕ್ತಿ (ಹೆಸರು ಗೊತ್ತಾಗಿಲ್ಲ), ಮತ್ತೊಬ್ಬ ಮಾಣಿಕ್ ದಾಸ್ ಎಂಬವರೆಂದು ಕೋಸ್ಟ್ ಗಾರ್ಡ್ ಮಾಹಿತಿ ನೀಡಿದೆ. ಈ ನಡುವೆ ಇಬ್ಬರನ್ನು ರಕ್ಷಿಸಿದ್ದು ಪಶ್ಚಿಮ ಬಂಗಾಳದ ಸುನಿಲ್ ದಾಸ್ (34), ತಮಿಳುನಾಡಿನ ರಾಮೇಶ್ವರದ ವೇಲ್ ಮುರುಗನ್ (37) ಎಂದು ಗುರುತಿಸಲಾಗಿದೆ.
ಬೋಟಿನಲ್ಲಿ ಒಟ್ಟು 14 ಮಂದಿ ಇದ್ದರೆನ್ನಲಾಗಿದ್ದು ಈ ಪೈಕಿ ಒಂಬತ್ತು ಮಂದಿಯ ಸುಳಿವು ಪತ್ತೆಯಾಗಿಲ್ಲ. ಕೋಸ್ಟ್ ಗಾರ್ಡ್ ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸಿಂಗಾಪುರ್ ಎಂವಿ ಆ್ಯಪಲ್ ಎಂಬ ಹೆಸರಿನ ಕಂಟೇನರ್ ಹಡಗು ಡಿಕ್ಕಿಯಾಗಿತ್ತು. ರಭಾ ಎಂಬ ಹೆಸರಿನ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರ್ ಮೂಲದ್ದಾಗಿದ್ದು ಎರಡು ದಿನಗಳ ಹಿಂದೆ ಬೇಪೂರ್ ನಿಂದ ಮೀನುಗಾರಿಕೆಗೆ ಹೊರಟಿತ್ತು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು.
In a tragic incident, three fishermen were killed after the boat start to sink by collision with Singapore ship in Mangalore. Several are said to be missing among 14 members two have been reduced and three found dead.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm