ಬ್ರೇಕಿಂಗ್ ನ್ಯೂಸ್
13-04-21 09:27 pm Headline Karnataka News Network ಕರಾವಳಿ
ಮಂಗಳೂರು, ಎ.13: ಅರಬ್ಬೀ ಸಮುದ್ರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿಗೆ ಡಿಕ್ಕಿಯಾಗಿ ದುರಂತಕ್ಕೀಡಾದ ಮೀನುಗಾರಿಕೆ ಬೋಟಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೂವರು ಕಾರ್ಮಿಕರ ಮೃತದೇಹ ಪತ್ತೆಯಾಗಿದ್ದು ಉಳಿದ ಸಿಬಂದಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಸಿಂಗಾಪುರ ಮೂಲದ ಕಂಟೇನರ್ ಹಡಗು ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಸಂಚರಿಸುತ್ತಿದ್ದಾಗ ಮೀನುಗಾರಿಕಾ ಬೋಟಿಗೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಕೋಸ್ಟ್ ಗಾರ್ಡ್ ಮತ್ತು ಕಂಟೇನರ್ ಹಡಗಿನ ಸಿಬಂದಿ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಮೂವರ ಮೃತದೇಹ ಪತ್ತೆಯಾಗಿದ್ದು ಅವರನ್ನು ಪಶ್ಚಿಮ ಬಂಗಾಳ ಮೂಲದ ಅಲೆಕ್ಸಾಂಡರ್ ಸೈರಂಗ್, ಅವರ ಮಾವ ಎನ್ನಲಾಗಿರುವ ಇನ್ನೊಬ್ಬ ವ್ಯಕ್ತಿ (ಹೆಸರು ಗೊತ್ತಾಗಿಲ್ಲ), ಮತ್ತೊಬ್ಬ ಮಾಣಿಕ್ ದಾಸ್ ಎಂಬವರೆಂದು ಕೋಸ್ಟ್ ಗಾರ್ಡ್ ಮಾಹಿತಿ ನೀಡಿದೆ. ಈ ನಡುವೆ ಇಬ್ಬರನ್ನು ರಕ್ಷಿಸಿದ್ದು ಪಶ್ಚಿಮ ಬಂಗಾಳದ ಸುನಿಲ್ ದಾಸ್ (34), ತಮಿಳುನಾಡಿನ ರಾಮೇಶ್ವರದ ವೇಲ್ ಮುರುಗನ್ (37) ಎಂದು ಗುರುತಿಸಲಾಗಿದೆ.
ಬೋಟಿನಲ್ಲಿ ಒಟ್ಟು 14 ಮಂದಿ ಇದ್ದರೆನ್ನಲಾಗಿದ್ದು ಈ ಪೈಕಿ ಒಂಬತ್ತು ಮಂದಿಯ ಸುಳಿವು ಪತ್ತೆಯಾಗಿಲ್ಲ. ಕೋಸ್ಟ್ ಗಾರ್ಡ್ ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸಿಂಗಾಪುರ್ ಎಂವಿ ಆ್ಯಪಲ್ ಎಂಬ ಹೆಸರಿನ ಕಂಟೇನರ್ ಹಡಗು ಡಿಕ್ಕಿಯಾಗಿತ್ತು. ರಭಾ ಎಂಬ ಹೆಸರಿನ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರ್ ಮೂಲದ್ದಾಗಿದ್ದು ಎರಡು ದಿನಗಳ ಹಿಂದೆ ಬೇಪೂರ್ ನಿಂದ ಮೀನುಗಾರಿಕೆಗೆ ಹೊರಟಿತ್ತು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು.
In a tragic incident, three fishermen were killed after the boat start to sink by collision with Singapore ship in Mangalore. Several are said to be missing among 14 members two have been reduced and three found dead.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm