ಬ್ರೇಕಿಂಗ್ ನ್ಯೂಸ್
13-04-21 09:27 pm Headline Karnataka News Network ಕರಾವಳಿ
ಮಂಗಳೂರು, ಎ.13: ಅರಬ್ಬೀ ಸಮುದ್ರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿಗೆ ಡಿಕ್ಕಿಯಾಗಿ ದುರಂತಕ್ಕೀಡಾದ ಮೀನುಗಾರಿಕೆ ಬೋಟಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೂವರು ಕಾರ್ಮಿಕರ ಮೃತದೇಹ ಪತ್ತೆಯಾಗಿದ್ದು ಉಳಿದ ಸಿಬಂದಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಸಿಂಗಾಪುರ ಮೂಲದ ಕಂಟೇನರ್ ಹಡಗು ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಸಂಚರಿಸುತ್ತಿದ್ದಾಗ ಮೀನುಗಾರಿಕಾ ಬೋಟಿಗೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಕೋಸ್ಟ್ ಗಾರ್ಡ್ ಮತ್ತು ಕಂಟೇನರ್ ಹಡಗಿನ ಸಿಬಂದಿ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಮೂವರ ಮೃತದೇಹ ಪತ್ತೆಯಾಗಿದ್ದು ಅವರನ್ನು ಪಶ್ಚಿಮ ಬಂಗಾಳ ಮೂಲದ ಅಲೆಕ್ಸಾಂಡರ್ ಸೈರಂಗ್, ಅವರ ಮಾವ ಎನ್ನಲಾಗಿರುವ ಇನ್ನೊಬ್ಬ ವ್ಯಕ್ತಿ (ಹೆಸರು ಗೊತ್ತಾಗಿಲ್ಲ), ಮತ್ತೊಬ್ಬ ಮಾಣಿಕ್ ದಾಸ್ ಎಂಬವರೆಂದು ಕೋಸ್ಟ್ ಗಾರ್ಡ್ ಮಾಹಿತಿ ನೀಡಿದೆ. ಈ ನಡುವೆ ಇಬ್ಬರನ್ನು ರಕ್ಷಿಸಿದ್ದು ಪಶ್ಚಿಮ ಬಂಗಾಳದ ಸುನಿಲ್ ದಾಸ್ (34), ತಮಿಳುನಾಡಿನ ರಾಮೇಶ್ವರದ ವೇಲ್ ಮುರುಗನ್ (37) ಎಂದು ಗುರುತಿಸಲಾಗಿದೆ.
ಬೋಟಿನಲ್ಲಿ ಒಟ್ಟು 14 ಮಂದಿ ಇದ್ದರೆನ್ನಲಾಗಿದ್ದು ಈ ಪೈಕಿ ಒಂಬತ್ತು ಮಂದಿಯ ಸುಳಿವು ಪತ್ತೆಯಾಗಿಲ್ಲ. ಕೋಸ್ಟ್ ಗಾರ್ಡ್ ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸಿಂಗಾಪುರ್ ಎಂವಿ ಆ್ಯಪಲ್ ಎಂಬ ಹೆಸರಿನ ಕಂಟೇನರ್ ಹಡಗು ಡಿಕ್ಕಿಯಾಗಿತ್ತು. ರಭಾ ಎಂಬ ಹೆಸರಿನ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರ್ ಮೂಲದ್ದಾಗಿದ್ದು ಎರಡು ದಿನಗಳ ಹಿಂದೆ ಬೇಪೂರ್ ನಿಂದ ಮೀನುಗಾರಿಕೆಗೆ ಹೊರಟಿತ್ತು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು.
In a tragic incident, three fishermen were killed after the boat start to sink by collision with Singapore ship in Mangalore. Several are said to be missing among 14 members two have been reduced and three found dead.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm