ಬ್ರೇಕಿಂಗ್ ನ್ಯೂಸ್
15-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.15: ನಗರದ ಬಳ್ಳಾಲ್ ಬಾಗ್ ನಲ್ಲಿರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ಮಳಿಗೆ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹರಡಿಕೊಂಡು ಮೇಲ್ಭಾಗದ ಫೋಮ್ ಸೀಲಿಂಗನ್ನು ಸುಟ್ಟು ಹಾಕಿದೆ.


ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡ ಹೊಸ ರೀತಿಯ ಮಳಿಗೆ ಆಗಿತ್ತು. ಸಿಟಿ ಸೆಂಟರ್, ಬಿಗ್ ಬಝಾರ್ ನಲ್ಲಿರುವ ರೀತಿ ಎಲ್ಲವನ್ನೂ ಒಳಗೊಂಡ ಸೂಪರ್ ಮಾರ್ಕೆಟ್. ಆದರೆ, ಯಾವುದೇ ಬಿಲ್ಡಿಂಗ್ ಕಟ್ಟದೆ ನೆಲದಲ್ಲೇ ಅಷ್ಟು ದೊಡ್ಡ ಮಾದರಿಯಲ್ಲಿ ಹೈಪರ್ ಮಾರ್ಕೆಟ್ ಸ್ಥಾಪಿಸಿದ್ದು ಮಂಗಳೂರಿನಲ್ಲಿ ಅದೇ ಮೊದಲು. ಜೀನಸು, ತರಕಾರಿಯಿಂದ ತೊಡಗಿ ಮನೆ, ಕಚೇರಿಗೆ ಬೇಕಾಗುವ ಎಲ್ಲ ಸಾಮಗ್ರಿಗಳು ಅಲ್ಲಿ ದೊರೆಯುತ್ತಿದ್ದವು. ಹೀಗಾಗಿ ಕಡಿಮೆ ಅವಧಿಯಲ್ಲಿ ನಗರದ ಜನರ ಪಾಲಿಗೆ ಮೆಚ್ಚಿನ ಸೂಪರ್ ಮಾರ್ಕೆಟ್ ಆಗಿತ್ತು.



ಈಗ ಹತ್ತು ಗಂಟೆಗೆ ರಾತ್ರಿ ಕರ್ಫ್ಯೂ ವಿಧಿಸುವುದರಿಂದ ನಿನ್ನೆ ರಾತ್ರಿ 9.30ಕ್ಕೆ ಮಳಿಗೆ ಕ್ಲೋಸ್ ಮಾಡಿ ತೆರಳಿದ್ದೆವು. ಹತ್ತುವರೆ ಹೊತ್ತಿಗೆ ಹತ್ತಿರದ ಅಪಾರ್ಟ್ಮೆಂಟ್ ನಿವಾಸಿಗಳು ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡಿರುವುದನ್ನು ಕರೆ ಮಾಡಿ ತಿಳಿಸಿದ್ದಾರೆ. ನಾವು ಬಂದ ಬಳಿಕವೂ ಅಗ್ನಿಶಾಮಕ ಸಿಬಂದಿ ಬರುವಾಗ ಲೇಟ್ ಆಗಿತ್ತು. ಅಷ್ಟರಲ್ಲಿ ಬೆಂಕಿ ಹರಡಿದ್ದು ಒಳಭಾಗದ ಸೀಲಿಂಗ್ ಪೂರ್ತಿ ಸುಟ್ಟು ಹೋಗಿದ್ದು ಪ್ಲಾಸ್ಟಿಕ್ ಉರಿದು ಕೆಳಗೆ ಬಿದ್ದು ಕೆಳಭಾಗದಲ್ಲಿದ್ದ ಸಾಮಗ್ರಿಗಳು ಕೂಡ ಹಾಳಾಗಿವೆ ಎಂದು ಹೇಳಿದರು ಅಲ್ಲಿನ ಸಿಬಂದಿ.



ಒಂದು ಕೋಟಿ ನಷ್ಟ ಆಗಿರಬಹುದೆಂದು ಕೆಲವರು ಅಂದಾಜಿಸಿದ್ದಾರೆ. ಇನ್ಶೂರೆನ್ಸ್ ಕಂಪನಿಯವರು ಬಂದಿಲ್ಲ. ಇನ್ಶೂರೆನ್ಸ್ ಇದೆ. ಎಸಿಯಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ. ಆದರೆ, ನಾವು ರಾತ್ರಿ ವೇಳೆ ಎಸಿ ಸೇರಿದಂತೆ ಎಲ್ಲವನ್ನೂ ಆಫ್ ಮಾಡಿ ಹೋಗಿದ್ದೆವು. ಪ್ರಕರಣ ದಾಖಲಾಗಿದೆ, ನಷ್ಟ ಅಂದಾಜು ಮಾಡುತ್ತಿದ್ದಾರೆ ಎಂದರು ಇನ್ನೊಬ್ಬ ಸಿಬಂದಿ.
A short circuit has triggered fire Fieldstar HyperMartet at Ballalbagh in Mangalore here on Thursday April 15, leading to panic. It is estimated of one crore loss to the company.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm