ಬ್ರೇಕಿಂಗ್ ನ್ಯೂಸ್
15-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.15: ನಗರದ ಬಳ್ಳಾಲ್ ಬಾಗ್ ನಲ್ಲಿರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ಮಳಿಗೆ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹರಡಿಕೊಂಡು ಮೇಲ್ಭಾಗದ ಫೋಮ್ ಸೀಲಿಂಗನ್ನು ಸುಟ್ಟು ಹಾಕಿದೆ.


ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡ ಹೊಸ ರೀತಿಯ ಮಳಿಗೆ ಆಗಿತ್ತು. ಸಿಟಿ ಸೆಂಟರ್, ಬಿಗ್ ಬಝಾರ್ ನಲ್ಲಿರುವ ರೀತಿ ಎಲ್ಲವನ್ನೂ ಒಳಗೊಂಡ ಸೂಪರ್ ಮಾರ್ಕೆಟ್. ಆದರೆ, ಯಾವುದೇ ಬಿಲ್ಡಿಂಗ್ ಕಟ್ಟದೆ ನೆಲದಲ್ಲೇ ಅಷ್ಟು ದೊಡ್ಡ ಮಾದರಿಯಲ್ಲಿ ಹೈಪರ್ ಮಾರ್ಕೆಟ್ ಸ್ಥಾಪಿಸಿದ್ದು ಮಂಗಳೂರಿನಲ್ಲಿ ಅದೇ ಮೊದಲು. ಜೀನಸು, ತರಕಾರಿಯಿಂದ ತೊಡಗಿ ಮನೆ, ಕಚೇರಿಗೆ ಬೇಕಾಗುವ ಎಲ್ಲ ಸಾಮಗ್ರಿಗಳು ಅಲ್ಲಿ ದೊರೆಯುತ್ತಿದ್ದವು. ಹೀಗಾಗಿ ಕಡಿಮೆ ಅವಧಿಯಲ್ಲಿ ನಗರದ ಜನರ ಪಾಲಿಗೆ ಮೆಚ್ಚಿನ ಸೂಪರ್ ಮಾರ್ಕೆಟ್ ಆಗಿತ್ತು.



ಈಗ ಹತ್ತು ಗಂಟೆಗೆ ರಾತ್ರಿ ಕರ್ಫ್ಯೂ ವಿಧಿಸುವುದರಿಂದ ನಿನ್ನೆ ರಾತ್ರಿ 9.30ಕ್ಕೆ ಮಳಿಗೆ ಕ್ಲೋಸ್ ಮಾಡಿ ತೆರಳಿದ್ದೆವು. ಹತ್ತುವರೆ ಹೊತ್ತಿಗೆ ಹತ್ತಿರದ ಅಪಾರ್ಟ್ಮೆಂಟ್ ನಿವಾಸಿಗಳು ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡಿರುವುದನ್ನು ಕರೆ ಮಾಡಿ ತಿಳಿಸಿದ್ದಾರೆ. ನಾವು ಬಂದ ಬಳಿಕವೂ ಅಗ್ನಿಶಾಮಕ ಸಿಬಂದಿ ಬರುವಾಗ ಲೇಟ್ ಆಗಿತ್ತು. ಅಷ್ಟರಲ್ಲಿ ಬೆಂಕಿ ಹರಡಿದ್ದು ಒಳಭಾಗದ ಸೀಲಿಂಗ್ ಪೂರ್ತಿ ಸುಟ್ಟು ಹೋಗಿದ್ದು ಪ್ಲಾಸ್ಟಿಕ್ ಉರಿದು ಕೆಳಗೆ ಬಿದ್ದು ಕೆಳಭಾಗದಲ್ಲಿದ್ದ ಸಾಮಗ್ರಿಗಳು ಕೂಡ ಹಾಳಾಗಿವೆ ಎಂದು ಹೇಳಿದರು ಅಲ್ಲಿನ ಸಿಬಂದಿ.



ಒಂದು ಕೋಟಿ ನಷ್ಟ ಆಗಿರಬಹುದೆಂದು ಕೆಲವರು ಅಂದಾಜಿಸಿದ್ದಾರೆ. ಇನ್ಶೂರೆನ್ಸ್ ಕಂಪನಿಯವರು ಬಂದಿಲ್ಲ. ಇನ್ಶೂರೆನ್ಸ್ ಇದೆ. ಎಸಿಯಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ. ಆದರೆ, ನಾವು ರಾತ್ರಿ ವೇಳೆ ಎಸಿ ಸೇರಿದಂತೆ ಎಲ್ಲವನ್ನೂ ಆಫ್ ಮಾಡಿ ಹೋಗಿದ್ದೆವು. ಪ್ರಕರಣ ದಾಖಲಾಗಿದೆ, ನಷ್ಟ ಅಂದಾಜು ಮಾಡುತ್ತಿದ್ದಾರೆ ಎಂದರು ಇನ್ನೊಬ್ಬ ಸಿಬಂದಿ.
A short circuit has triggered fire Fieldstar HyperMartet at Ballalbagh in Mangalore here on Thursday April 15, leading to panic. It is estimated of one crore loss to the company.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm