ಬ್ರೇಕಿಂಗ್ ನ್ಯೂಸ್
16-04-21 11:17 pm Mangaluru correspondent ಕರಾವಳಿ
ಮಂಗಳೂರು, ಎ.16 : ಅರಬ್ಬೀ ಸಮುದ್ರದಲ್ಲಿ ದುರಂತಕ್ಕೀಡಾದ ಬೋಟಿನಲ್ಲಿ ನಾಪತ್ತೆಯಾಗಿದ್ದ ಒಂಬತ್ತು ಮೀನುಗಾರರ ಪೈಕಿ ಮೂವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಉಳಿದ ಆರು ಮಂದಿಯ ಪತ್ತೆಗಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಕೋಸ್ಟ್ ಗಾರ್ಡ್ ಪಡೆಯು ‘ಐಎನ್ಎಸ್ ನಿರ್ದೇಶಕ್’ ಹಡಗಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಮುದ್ರದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಶವಗಳನ್ನು ಎನ್ಎಂಪಿಟಿ ಬಂದರಿಗೆ ತರಲಾಗಿದ್ದು ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರಿಸಲಾಗಿದೆ. ನಾಲ್ಕು ದಿನಗಳಿಂದ ಮೃತದೇಹಗಳು ನೀರಿನಲ್ಲಿದ್ದ ಕಾರಣ ಊದಿಕೊಂಡಿದ್ದಲ್ಲದೆ, ಗುರುತು ಸಿಗದಷ್ಟು ವಿಕಾರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟ ಮೂವರ ಮೃತದೇಹ ಎರಡು ದಿನಗಳ ಹಿಂದೆಯೇ ಪತ್ತೆಯಾಗಿದ್ದು ಅವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಕಳಿಸಿ ಕೊಡಲಾಗಿತ್ತು. ರಕ್ಷಿಸಲ್ಪಟ್ಟ ಇತರ ಇಬ್ಬರನ್ನು ಕೂಡ ಅವರದೇ ಊರಿಗೆ ಕಳುಹಿಸಲಾಗಿತ್ತು.
ಇದೀಗ ನಾಲ್ಕು ದಿನಗಳ ಬಳಿಕ ಮೂರು ಮಂದಿಯ ಶವ ಸಿಕ್ಕಿದ್ದರೆ, ಇನ್ನು ಆರು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು ಎನ್ನೋ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಮೀನು ಕಾರ್ಮಿಕರ ಕುಟುಂಬದ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
The Coast guard team has found three dead bodies of the Missing fishermen and search for the rest six is on. A fishing boat capsized off Mangaluru coast afterr collision with a huge ship.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm