ಬ್ರೇಕಿಂಗ್ ನ್ಯೂಸ್
16-04-21 11:17 pm Mangaluru correspondent ಕರಾವಳಿ
ಮಂಗಳೂರು, ಎ.16 : ಅರಬ್ಬೀ ಸಮುದ್ರದಲ್ಲಿ ದುರಂತಕ್ಕೀಡಾದ ಬೋಟಿನಲ್ಲಿ ನಾಪತ್ತೆಯಾಗಿದ್ದ ಒಂಬತ್ತು ಮೀನುಗಾರರ ಪೈಕಿ ಮೂವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಉಳಿದ ಆರು ಮಂದಿಯ ಪತ್ತೆಗಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಕೋಸ್ಟ್ ಗಾರ್ಡ್ ಪಡೆಯು ‘ಐಎನ್ಎಸ್ ನಿರ್ದೇಶಕ್’ ಹಡಗಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಮುದ್ರದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಶವಗಳನ್ನು ಎನ್ಎಂಪಿಟಿ ಬಂದರಿಗೆ ತರಲಾಗಿದ್ದು ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರಿಸಲಾಗಿದೆ. ನಾಲ್ಕು ದಿನಗಳಿಂದ ಮೃತದೇಹಗಳು ನೀರಿನಲ್ಲಿದ್ದ ಕಾರಣ ಊದಿಕೊಂಡಿದ್ದಲ್ಲದೆ, ಗುರುತು ಸಿಗದಷ್ಟು ವಿಕಾರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟ ಮೂವರ ಮೃತದೇಹ ಎರಡು ದಿನಗಳ ಹಿಂದೆಯೇ ಪತ್ತೆಯಾಗಿದ್ದು ಅವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಕಳಿಸಿ ಕೊಡಲಾಗಿತ್ತು. ರಕ್ಷಿಸಲ್ಪಟ್ಟ ಇತರ ಇಬ್ಬರನ್ನು ಕೂಡ ಅವರದೇ ಊರಿಗೆ ಕಳುಹಿಸಲಾಗಿತ್ತು.
ಇದೀಗ ನಾಲ್ಕು ದಿನಗಳ ಬಳಿಕ ಮೂರು ಮಂದಿಯ ಶವ ಸಿಕ್ಕಿದ್ದರೆ, ಇನ್ನು ಆರು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು ಎನ್ನೋ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಮೀನು ಕಾರ್ಮಿಕರ ಕುಟುಂಬದ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
The Coast guard team has found three dead bodies of the Missing fishermen and search for the rest six is on. A fishing boat capsized off Mangaluru coast afterr collision with a huge ship.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm