ಬ್ರೇಕಿಂಗ್ ನ್ಯೂಸ್
17-04-21 04:06 pm Mangalore Correspondent ಕರಾವಳಿ
ಮಂಗಳೂರು, ಎ.17: ಹಾಸನದಲ್ಲಿ ರೇವ್ ಪಾರ್ಟಿ ಆಯೋಜಿಸಿ ಸಿಕ್ಕಿಬಿದ್ದಿರುವ ಮಂಗಳೂರಿನ ನಾರ್ಕೋಟಿಕ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶ್ರೀಲತಾ ಅವರನ್ನು ಮಂಗಳೂರು ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.

ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶ್ರೀಲತಾ ವಿರುದ್ಧ ಹಾಸನದ ಆಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ ಹಾಸನ ಎಸ್ಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಆರೋಪಿಗಳನ್ನು ತನಿಖೆ ನಡಸಲಾಗಿತ್ತು. ತನಿಖೆ ವೇಳೆ ಶ್ರೀಲತಾ ಮತ್ತು ಆಕೆಯ ಮಗ ಅತುಲ್, ಎಸ್ಟೇಟ್ ಮಾಲೀಕ ಗಗನ್ ಜೊತೆ ವಾರದ ಮೊದಲಿನಿಂದಲೇ ನಿರಂತರ ಸಂಪರ್ಕದಲ್ಲಿದ್ದುದ್ದು ಸಾಬೀತಾಗಿತ್ತು. ಅಲ್ಲದೆ, ರೇವ್ ಪಾರ್ಟಿ ನಡೆಸುವುದಕ್ಕೆ ಸ್ಥಳೀಯ ಪೊಲೀಸರ ಅನುಮತಿಯೂ ಬೇಕಾಗಿ ಬರಲ್ಲ. ಮಂಗಳೂರು ಸಿಸಿಬಿಯಲ್ಲಿ ತಾನು ಎಎಸ್ಐ ಆಗಿದ್ದು ಪ್ರಭಾವ ಹೊಂದಿದ್ದೇನೆ ಎಂದು ಎಸ್ಟೇಟ್ ಮಾಲೀಕನಿಗೆ ಭರವಸೆ ತುಂಬಿದ್ದಳು ಅನ್ನೋ ವಿಚಾರವೂ ತನಿಖೆಯಲ್ಲಿ ಬಯಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಕಮಿಷನರ್ ಶಶಿಕುಮಾರ್, ಹಾಸನ ಎಸ್ಪಿ ನೇತೃತ್ವದಲ್ಲಿ ನಡೆದಿರುವ ತನಿಖೆಯಲ್ಲಿ ಲೋಪ ಆಗಿರುವುದು ಕಂಡುಬಂದಿದ್ದು, ಸದ್ಯಕ್ಕೆ ಕರ್ತವ್ಯದಿಂದ ಅಮಾನತು ಮಾಡಿದ್ದೇವೆ. ಒಟ್ಟು ಘಟನೆ ಬಗ್ಗೆ ಎಸಿಪಿ ದರ್ಜೆಯ ಅಧಿಕಾರಿಯನ್ನು ನೇಮಿಸಿ, ತನಿಖೆ ನಡೆಸಲಾಗುವುದು. ಆಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.


ಎ.10ರಂದು ಹಾಸನದ ಆಲೂರು ಠಾಣೆ ವ್ಯಾಪ್ತಿಯ ಹೊಂಗರವಳ್ಳಿ ಎಂಬ ನಿಗೂಢ ತಾಣದಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮಂಗಳೂರು ಮತ್ತು ಬೆಂಗಳೂರಿನ ಅತಿ ಹೆಚ್ಚು ಮಂದಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ವಿಚಾರ ತಿಳಿದ ಹಾಸನ ಪೊಲೀಸರು ನಸುಕಿನಲ್ಲಿ ದಾಳಿ ಮಾಡಿ, 131 ಮಂದಿಯನ್ನು ವಶಕ್ಕೆ ಪಡೆದಿದ್ದರು. ಈ ವೇಳೆ, ಸಾಕಷ್ಟು ಮಾದಕ ದ್ರವ್ಯಗಳು, ಡ್ರಗ್ಸ್ ಮಾತ್ರೆಗಳು, ಗಾಂಜಾ, ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ಈ ವೇಳೆ, ಮಂಗಳೂರಿನ ಲೇಡಿ ಪೊಲೀಸ್ ಶ್ರೀಲತಾ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಪಾರ್ಟಿ ಆಯೋಜನೆ ಮಾಡಿದ್ದ ಶ್ರೀಲತಾ ಮಗ ಅತುಲ್ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದಾನೆ.
ಹಾಸನದಲ್ಲಿ ರೇವ್ ಪಾರ್ಟಿ ; ಮಂಗಳೂರಿನ ಲೇಡಿ ಪೊಲೀಸ್ ಮತ್ತು ಮಗ ಕಿಂಗ್ ಪಿನ್ ! ಪೊಲೀಸ್ ಅರೆಸ್ಟ್, ಮಗ ಎಸ್ಕೇಪ್ !
Mangalore Police commissioners Shashi Kumar has suspended lady Police of Narcotics Srilata for organising Rave Party in Hassan in which more than 120 boys and girls were arrested.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm