ಬ್ರೇಕಿಂಗ್ ನ್ಯೂಸ್
21-04-21 11:28 am Udupi Correspondent ಕರಾವಳಿ
ಉಡುಪಿ, ಎ. 21 : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ(52) ಕೊಲೆ ಪ್ರಕರಣದಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸಲಿದೆ.
2021ರ ಮಾ.30ರಿಂದ ವಿಚಾರಣೆ ನಡೆದು ಆರಂಭದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಅಂತಿಮ ವಾದ ಮಂಡಿಸಿದ್ದರೆ, ನಂತರ ಆರೋಪಿಗಳ ಪರ ವಕೀಲರು ಪ್ರತಿವಾದವನ್ನು ಮಂಡಿಸಿದ್ದರು.
ವಾದ ಆಲಿಸಿರುವ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್., ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ ಶೆಟ್ಟಿ ಹಾಜರಿದ್ದರು.
ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ದೊರೆತರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರಿನ ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟರೆ, ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.
ಆರೋಪಿಗಳು 2016ರ ಜು.28ರಂದು ಮಧ್ಯಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಡಲಾಗಿತ್ತು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ಬೆಳಕಿಗೆ ಬಂದಿತ್ತು. ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ನನ್ನು ಮತ್ತು ಆ. 8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.
Udupi Bhaskar Shetty murder cases final verdict by the court to be held on May 29th by Udupi court.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm