ಬ್ರೇಕಿಂಗ್ ನ್ಯೂಸ್
21-04-21 11:28 am Udupi Correspondent ಕರಾವಳಿ
ಉಡುಪಿ, ಎ. 21 : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ(52) ಕೊಲೆ ಪ್ರಕರಣದಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸಲಿದೆ.
2021ರ ಮಾ.30ರಿಂದ ವಿಚಾರಣೆ ನಡೆದು ಆರಂಭದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಅಂತಿಮ ವಾದ ಮಂಡಿಸಿದ್ದರೆ, ನಂತರ ಆರೋಪಿಗಳ ಪರ ವಕೀಲರು ಪ್ರತಿವಾದವನ್ನು ಮಂಡಿಸಿದ್ದರು.

ವಾದ ಆಲಿಸಿರುವ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್., ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ ಶೆಟ್ಟಿ ಹಾಜರಿದ್ದರು.
ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ದೊರೆತರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರಿನ ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟರೆ, ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.

ಆರೋಪಿಗಳು 2016ರ ಜು.28ರಂದು ಮಧ್ಯಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಡಲಾಗಿತ್ತು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ಬೆಳಕಿಗೆ ಬಂದಿತ್ತು. ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ನನ್ನು ಮತ್ತು ಆ. 8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.
Udupi Bhaskar Shetty murder cases final verdict by the court to be held on May 29th by Udupi court.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm