ಬ್ರೇಕಿಂಗ್ ನ್ಯೂಸ್
21-04-21 12:45 pm Mangalore Correspondent ಕರಾವಳಿ
ಸುಳ್ಯ, ಎ.21: ರಾಜ್ಯ ಸರಕಾರ ಕೋವಿಡ್ ನಿರ್ಬಂಧಗಳನ್ನು ಹೇರಿದ್ದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿಢೀರ್ ಆಗಿ ಸರ್ಪ ಸಂಸ್ಕಾರ ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಪ ಸಂಸ್ಕಾರ ಸೇವೆಯ ಹಿನ್ನೆಲೆಯಲ್ಲಿ ನೂರಾರು ಭಕ್ತರು ಒಂದು ದಿನದ ಮುನ್ನವೇ ಕ್ಷೇತ್ರಕ್ಕೆ ಆಗಮಿಸಿದ್ದರು. ಸರ್ಪ ಸಂಸ್ಕಾರ ಸೇವೆ ನೆರವೇರಿಸುವ ಮಂದಿ ಎರಡು ದಿನದ ಮೊದಲೇ ಬಂದು ಇರಬೇಕಾಗುವುದರಿಂದ ಭಕ್ತರು ಸೇವೆಯನ್ನು ತಿಂಗಳ ಮೊದಲೇ ಬುಕ್ ಮಾಡಿಕೊಂಡು ಬಂದಿದ್ದರು.

ಆದರೆ, ದಿಢೀರ್ ಆಗಿ ಸೇವೆಯನ್ನು ಬಂದ್ ಮಾಡಿರುವುದಕ್ಕೆ ದೇವಸ್ಥಾನದ ಆಡಳಿತ ಸಮಿತಿಯನ್ನು ಭಕ್ತರು ತರಾಟೆಗೆ ತೆಗೆದುಕೊಂಡರು. ಸರ್ಪ ಸಂಸ್ಕಾರ ಸೇವೆಯನ್ನು ನಡೆಸಲು ಕುಕ್ಕೆಗೆ ಬಂದಿದ್ದೆವು. ಎರಡು- ಮೂರು ತಿಂಗಳ ಮೊದಲೇ ಬುಕ್ ಮಾಡಿದ್ದೆವು. ಆದರೆ ಈಗ ಕೋವಿಡ್ ನೆಪದಲ್ಲಿ ದಿಢೀರ್ ಆಗಿ ರದ್ದು ಪಡಿಸಿದ್ದಾರೆ. ದೂರದ ಊರುಗಳಿಂದ ಎರಡು ದಿನ ಮೊದಲೇ ರೂಮ್ ಬುಕ್ ಮಾಡಿಕೊಂಡು ಉಳಿದುಕೊಂಡವರಿಗೆ ಸಮಸ್ಯೆ ಆಗಿದೆ. ಸೇವೆ ಇರುವುದನ್ನು ಖಚಿತಪಡಿಸಿಕೊಂಡೇ ಬಂದಿದ್ದೆವು , ಈಗ ಇಲ್ಲ ಎಂದರೆ ನಾವು ಏನು ಮಾಡಬೇಕು ಎಂದು ಪ್ರಶ್ನೆ ಮಾಡುತ್ತಿದ್ದರು.
ಸರ್ಪ ಸಂಸ್ಕಾರ ಸೇವೆ ಎರಡು ದಿನ ನಡೆಯುತ್ತದೆ. ಅದಕ್ಕಾಗಿ ಮುನ್ನಾ ದಿನವೇ ಬಂದು ಇರಬೇಕಾಗುತ್ತದೆ. ಆದರೆ, ಸರಕಾರದ ಮಾರ್ಗಸೂಚಿ ದಿಢೀರ್ ಆಗಿ ಬಂದಿದ್ದು, ಅದನ್ನು ಪಾಲಿಸಬೇಕಾಗುತ್ತದೆ. ಗುರುವಾರದ ಸೇವೆಗೆ ಅವಕಾಶ ಇಲ್ಲದ ಕಾರಣ ಬುಧವಾರದ ಸೇವೆಯನ್ನು ರದ್ದು ಪಡಿಸಲಾಗಿದೆ ಎಂದು ಆಡಳಿತ ಮಂಡಳಿಯ ಸದಸ್ಯರು ಹೇಳಿದರು. ಸರಕಾರದ ಮಾರ್ಗಸೂಚಿ ಪ್ರಕಾರ ದೇವಾಲಯದಲ್ಲಿ ಯಾವುದೇ ಸೇವೆಗಳನ್ನು ನಡೆಸಲು ಅವಕಾಶ ಇಲ್ಲ. ಆದರೆ ಈ ಬಗ್ಗೆ ಅರಿಯದ ನೂರಾರು ಭಕ್ತಾದಿಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು.
Devotees turn angry after Poojas being cancelled in Kukke Shri Subrahmanya Temple. Many devotees had already arrived from poojas but we're disappointed as all the prayers were cancelled.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm