ಬ್ರೇಕಿಂಗ್ ನ್ಯೂಸ್
21-04-21 12:57 pm Mangalore Correspondent ಕರಾವಳಿ
ಉಳ್ಳಾಲ, ಎ.21 : ಕೋವಿಡ್ ನಿರ್ಬಂಧ ಕರಾವಳಿಯಲ್ಲಿ ಈಗಾಗಲೇ ನಿಗದಿಯಾಗಿರುವ ಧಾರ್ಮಿಕ ವಿಧಿಗಳಿಗೆ ಭಾರೀ ತೊಡಕಾಗಿ ಪರಿಣಮಿಸಿದೆ. ಮಂಗಳೂರು ಹೊರವಲಯದ ಇತಿಹಾಸ ಪ್ರಸಿದ್ಧ ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ವಿಧಿಗಳು ನಡೆಯುತ್ತಿದ್ದು ಜನ ಸೇರಬಾರದೆಂಬ ಸರಕಾರದ ಆದೇಶ ಆಡಳಿತ ಮಂಡಳಿಯ ಸದಸ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಸೋಮವಾರ ತೊಕ್ಕೊಟ್ಟಿನಿಂದ ಸೋಮೇಶ್ವರ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಮತ್ತು ನೂತನ ಬ್ರಹ್ಮರಥದ ಸಮರ್ಪಣೆ ಹಿನ್ನೆಲೆಯಲ್ಲಿ ಮೆರವಣಿಗೆ ನಡೆಸಿದ್ದ ಕಾರಣಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ವಿರುದ್ದ ಉಳ್ಳಾಲ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ನಿಗದಿಯಾಗಿದ್ದ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶದ ಕಾರ್ಯಕ್ರಮ ಕೊರೊನಾ ಲಾಕ್ ಡೌನ್ ಕಾರಣದಿಂದ ಮುಂದೂಲ್ಪಟ್ಟಿತ್ತು. ಈ ಬಾರಿ ಮತ್ತೆ ಉತ್ಸವ ಸಮಿತಿಯವರು ಎ.18ರಿಂದ 30ರ ವರೆಗೆ ಬ್ರಹ್ಮಕಲಶ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದ್ದರು. ಆದರೆ, ರಾಜ್ಯದಲ್ಲಿ ಮತ್ತೆ ಕೋವಿಡ್ ನಿರ್ಬಂಧ ತಲೆದೋರಿದ್ದು ಸರಳ ವಿಧಿಗಳ ಮೂಲಕ ಕಾರ್ಯಕ್ರಮ ಮಾಡುವಂತಾಗಿದೆ.
ಎರಡು ದಿನಗಳ ಹಿಂದೆ ತೊಕ್ಕೊಟ್ಟು ವೀರಮಾರುತಿ ವ್ಯಾಯಾಮ ಶಾಲೆಯಿಂದ ಸೋಮನಾಥ ಕ್ಷೇತ್ರಕ್ಕೆ ಹಸಿರು ಹೊರೆಕಾಣಿಕೆ ಮತ್ತು ನೂತನ ಬ್ರಹ್ಮರಥ ಸಮರ್ಪಣೆಯ ಶೋಭಾಯಾತ್ರೆ ನಡೆದಿತ್ತು. ಶೋಭಾ ಯಾತ್ರೆಯಲ್ಲಿ ಸಹಸ್ರಾರು ಜನರು ಪಾಲ್ಗೊಂಡಿದ್ದರು. ಕೋವಿಡ್ ನಿಯಮಗಳನ್ನು ಪಾಲಿಸದೆ ಮೆರವಣಿಗೆ ನಡೆಸಿರುವ ಕಾರಣಕ್ಕೆ ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಅವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸೋಮೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ವಿರುದ್ಧ ಕೇಸು ದಾಖಲಿಸಿದ್ದಾರೆ.
ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ, ಐಪಿಸಿ ಸೆಕ್ಷನ್ 269ರಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಸೂಚನೆಯಂತೆ ಮೂರು ದಿನಗಳ ಹಿಂದೆಯೇ ತಹಶೀಲ್ದಾರ್ ಅವರು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಮೊಟಕುಗೊಳಿಸುವಂತೆ ಸೋಮೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ನೋಟೀಸು ನೀಡಿದ್ದರು. ಆದರೆ ಅದನ್ನು ಉಲ್ಲಂಘಿಸಿ ಶೋಭಾಯಾತ್ರೆ ನಡೆಸಲಾಗಿತ್ತು.
A case has been filed against Someshwara Temple for violating covid guidelines by gathering and holding procession.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 09:15 pm
Mangalore Correspondent
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm