ಬ್ರೇಕಿಂಗ್ ನ್ಯೂಸ್
21-04-21 02:57 pm Mangalore Correspondent ಕರಾವಳಿ
ಮಂಗಳೂರು, ಎ.21: ಒಂದೆಡೆ ರಾತ್ರಿ ಕರ್ಫ್ಯೂ, ಇನ್ನೊಂದೆಡೆ ಹಗಲು ಹೊತ್ತಿನಲ್ಲಿ ಟಫ್ ರೂಲ್ಸ್ ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಮಾಡಿದೆ. ಇದರಂತೆ, ಹೊಟೇಲ್, ಕ್ಯಾಂಟೀನ್, ದರ್ಶಿನಿ ಕೇಂದ್ರಗಳು ಬಂದ್ ಆಗಿದ್ದು, ಊಟ, ತಿಂಡಿಯ ಅಗತ್ಯ ಇದ್ದವರು ಪಾರ್ಸೆಲ್ ಒಯ್ಯಬೇಕೆಂದು ಸೂಚನೆ ನೀಡಲಾಗಿದೆ. ಹೊಟೇಲ್ ಇಲ್ಲದೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ ಕರ್ತವ್ಯಕ್ಕೆ ನಿಯೋಜನೆ ಆಗಿರುವ ಪೊಲೀಸರಿಗೆ ಕಮಿಷನರ್ ಕಚೇರಿ ಹಿಂಭಾಗದ ಮೈದಾನದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ.
ಪೊಲೀಸರೇ ಸೇರಿಕೊಂಡು ಮೈದಾನದಲ್ಲಿ ಊಟ ರೆಡಿ ಮಾಡುತ್ತಿದ್ದು, ಮೊದಲ ದಿನ 300 ಮಂದಿಗೆ ಊಟ ರೆಡಿ ಮಾಡಲಾಗಿತ್ತು. ಊಟ, ನೀರು ಸಿಗದೆ ಕರ್ತವ್ಯ ನಿರತ ಸಿಬಂದಿ ಪರದಾಟ ಅನುಭವಿಸಬಾರದು ಎಂಬ ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮುತುವರ್ಜಿ ವಹಿಸ್ಕೊಂಡು ಈ ವ್ಯವಸ್ಥೆ ಮಾಡಿದ್ದಾರೆ.
ಮಧ್ಯಾಹ್ನ 11 ಗಂಟೆಯಿಂದ ಮೂರು ಗಂಟೆ ವರೆಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಮಂಗಳೂರು ನಗರ ಭಾಗದಲ್ಲಿ ಕರ್ತವ್ಯಕ್ಕೆ ನಿಯೋಜನೆ ಆದವರು ತಾವೇ ಬಂದು ಊಟ ಮಾಡಿಕೊಂಡು ಹೋಗಲು ಸೂಚಿಸಲಾಗಿದೆ. ಈಗ 25 ಸಾವಿರ ರೂಪಾಯಿ ಕೈಯಿಂದಲೇ ಸುರಿದು ಊಟದ ವ್ಯವಸ್ಥೆಯನ್ನು ಆರಂಭಿಸಿದ್ದೇವೆ. ಸರಕಾರದಿಂದ ಹಣ ಕ್ಲೈಮ್ ಮಾಡಲು ಆಗುತ್ತದೆಯೇ ನೋಡಬೇಕು ಎಂದಿದ್ದಾರೆ ಕಮಿಷನರ್ ಶಶಿಕುಮಾರ್.
ಕಮಿಷನರ್ ಕಚೇರಿಗೆ ತೆರಳುವುದಕ್ಕೂ ನಿರ್ಬಂಧ
ಸಾಮಾನ್ಯವಾಗಿ ಕಮಿಷನರ್ ಕಚೇರಿಗೆ ನೂರಾರು ಮಂದಿ ಆಗಮಿಸುತ್ತಾರೆ. ವಿವಿಧ ರೀತಿಯ ಅಗತ್ಯ ಕೆಲಸಗಳನ್ನು ಮಾಡಿಸುವುದಕ್ಕಾಗಿ ಕಚೇರಿಗೆ ಅಲೆದಾಡುತ್ತಾರೆ. ಆದರೆ, ಕೋವಿಡ್ ನಿರ್ಬಂಧ ಕಾರಣದಿಂದ ಮಂಗಳೂರು ಕಮಿಷನರ್ ಕಚೇರಿಗೆ ನೇರವಾಗಿ ಹೋಗುವಂತಿಲ್ಲ. ಹೊರಭಾಗದಲ್ಲಿ ಕಿಯೋಸ್ಕ್ ಮಾಡಲಾಗಿದ್ದು, ಅಲ್ಲಿಯೇ ಅರ್ಜಿಗಳನ್ನು ಕೊಡಬೇಕು. ಅಗತ್ಯ ಇದ್ದರೆ ಮಾತ್ರ ಕಮಿಷನರ್ ಅಥವಾ ಡಿಸಿಪಿಗಳನ್ನು ಭೇಟಿ ಮಾಡಲು ಅವಕಾಶ ನೀಡಲಾಗುತ್ತಿದೆ.
Night curfew in Karnataka, Mangalore Police Commissioner Shashi Kumar organises free food for Police Personnel till May 4th by his expenses. Police staff have highly appreciated commissioner for his commendable service.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm