ಬ್ರೇಕಿಂಗ್ ನ್ಯೂಸ್
22-04-21 11:44 am Mangalore Correspondent ಕರಾವಳಿ
ಮಂಗಳೂರು, ಎ.22: ಚಾಲಕನ ಬೇಜವಾಬ್ದಾರಿಯಿಂದ ಕಸ ವಿಲೇವಾರಿ ಮಾಡುವ ಟ್ರಕ್ ಇಳಿಜಾರಿನಲ್ಲಿ ನೇರವಾಗಿ ನುಗ್ಗಿ ಬಂದು ನಾಲ್ಕಾರು ವಾಹನಗಳಿಗೆ ಡಿಕ್ಕಿಯಾಗಿದ್ದಲ್ಲದೆ, ಮಾರುಕಟ್ಟೆಯ ಅಂಗಡಿಗಳಿಗೆ ನುಗ್ಗಿದ ಘಟನೆ ಕಂಕನಾಡಿ ಮಾರುಕಟ್ಟೆಯಲ್ಲಿ ನಡೆದಿದೆ.


ಮಂಗಳೂರು ನಗರದಲ್ಲಿ ಕಸ ಹೆಕ್ಕಲು ಗುತ್ತಿಗೆ ಪಡೆದಿರುವ ಆಂಟನಿ ವೇಸ್ಟ್ ಕಂಪನಿಯ ಟ್ರಕ್ಕನ್ನು ಚಾಲಕ ಕಂಕನಾಡಿ ಮಾರುಕಟ್ಟೆ ಬಳಿ ನಿಲ್ಲಿಸಿ, ಕೆಳಕ್ಕೆ ಇಳಿದಿದ್ದ. ಹಿಂದಿನಿಂದ ಕಾರ್ಮಿಕರು ಕಸ ತುಂಬಿಸುತ್ತಿದ್ದರು. ಚಾಲಕ ವಾಹನವನ್ನು ನ್ಯೂಟ್ರಲ್ ನಲ್ಲಿರಿಸಿ ಇಳಿದಿದ್ದರಿಂದ ಟ್ರಕ್ ಕೆಳಗೆ ಇಳಿದಿದ್ದು, ಅಲ್ಲಿದ್ದ ಮೂರು ಕಾರು ಮತ್ತು ಎರಡು ದ್ವಿಚಕ್ರ ವಾಹನಗಳ ಮೇಲೆ ಹರಿದಿದ್ದಲ್ಲದೆ, ಇಂಡಿಯನ್ ಚಿಕನ್ ಎನ್ನುವ ಕೋಳಿ ಮಾಂಸದ ಅಂಗಡಿಗೆ ನುಗ್ಗಿ ಜಖಂ ಮಾಡಿದೆ.



ಚಿಕನ್ ಶಾಪ್ ಎದುರಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟರ್ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಅಂಗಡಿಯ ಇಬ್ಬರು ಸಿಬಂದಿ ಕಾಲಿಗೆ ಗಾಯಗೊಂಡಿದ್ದಾರೆ. ಟ್ರಕ್ ಅಂಗಡಿಯ ಮುಂಭಾಗಕ್ಕೆ ಬಡಿದು ನಿಂತಿದ್ದು, ಕೂಡಲೇ ಅದಕ್ಕೆ ಹತ್ತಿದ ಸ್ಥಳೀಯರು ವಾಹನವನ್ನು ಆಫ್ ಮಾಡಿದ್ದಾರೆ. ಘಟನೆ ಸಂದರ್ಭ ಹೆಚ್ಚು ಜನರು ಇಲ್ಲದ ಕಾರಣ ಪ್ರಾಣಾಪಾಯ ಆಗಿಲ್ಲ. ಸಾರ್ವಜನಿಕರು ಟ್ರಕ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ, ಆತ ಅಲ್ಲಿಂದ ಪರಾರಿಯಾಗಿದ್ದಾನೆ.



ಸ್ಥಳೀಯರ ಪ್ರಕಾರ, ಟ್ರಕ್ ಚಾಲಕ ಕೆಳಗಿಳಿದು ಮೊಬೈಲಲ್ಲಿ ಮಾತನಾಡುತ್ತಿದ್ದ. ಟ್ರಕ್ಕನ್ನು ನ್ಯೂಟ್ರಲ್ ನಲ್ಲಿರಿಸಿ ಕೆಳಕ್ಕೆ ಇಳಿದಿದ್ದೇ ತಪ್ಪು. ಆತನನ್ನು ಈ ಘಟನೆಗೆ ಹೊಣೆಯಾಗಿಸಬೇಕೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕಂಕನಾಡಿ ಮತ್ತು ಟ್ರಾಫಿಕ್ ಪೊಲೀಸರು ಆಗಮಿಸಿ ಲಾರಿಯನ್ನು ತೆರವು ಮಾಡಿ ವಶಕ್ಕೆ ಪಡೆದಿದ್ದಾರೆ.
Four Cars and two wheelers completely damaged after a Mcc Antony Waste truck entered a Chicken Shop in Kankanady Market in Mangalore. The accident took place as driver kept the truck in nutral and got down of the truck.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
27-03-26 12:11 pm
HK News Staffer
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm