ಬ್ರೇಕಿಂಗ್ ನ್ಯೂಸ್
22-04-21 03:36 pm Mangalore Correspondent ಕರಾವಳಿ
ಮಂಗಳೂರು, ಎ.22: ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಹೇರಿದ ಹಿನ್ನೆಲೆಯಲ್ಲಿ ಮಂಗಳೂರು ಬಿಷಪ್ ತಮ್ಮ ವ್ಯಾಪ್ತಿಯ ಚರ್ಚ್ ಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನಾ ಪತ್ರ ಹೊರಡಿಸಿದ್ದಾರೆ. ಅಲ್ಲದೆ, ಮದುವೆ, ಅಂತ್ಯಕ್ರಿಯೆ ಹೊರತುಪಡಿಸಿ ಚರ್ಚ್ ಗಳಿಗೆ ಸಾರ್ವಜನಿಕರು ಬರದಂತೆ ಸೂಚನೆ ನೀಡಿದ್ದಾರೆ.
ನಮ್ಮ ಪ್ರಾರ್ಥನಾ ಕೇಂದ್ರ, ಚರ್ಚ್ ಗಳ ವ್ಯಾಪ್ತಿಯಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಅದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲಾಗುವುದು. ಸ್ಥಳೀಯಾಡಳಿತದ ಅನುಮತಿಯೊಂದಿಗೆ ಚರ್ಚ್ ಒಳಗೆ ಮದುವೆ ಮತ್ತು ಅಂತ್ಯಕ್ರಿಯೆ ಪ್ರಕ್ರಿಯೆಗಳನ್ನು ನಡೆಸಲು ಮಾತ್ರ ಅವಕಾಶ ನೀಡಲಾಗಿದೆ.
ಮದುವೆ ಕಾರ್ಯಕ್ರಮಗಳಲ್ಲಿ ಅರ್ಚಕರು, ಫೋಟೋಗ್ರಾಫರ್ ಸೇರಿ 50 ಮಂದಿಗೆ ಮಾತ್ರ ಅವಕಾಶವಿದೆ. ಅಂತ್ಯಕ್ರಿಯೆಗಳಿಗೆ 20 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ಇರುತ್ತದೆ. ಮದುವೆ ಕಾರ್ಯಕ್ರಮಗಳಲ್ಲಿ ಆಯೋಜಕರೇ ಸ್ಥಳೀಯಾಡಳಿತಗಳಿಂದ ಪಾಸ್ ವ್ಯವಸ್ಥೆ ಮಾಡಿಸಿಕೊಂಡು ಬರಬೇಕು. ಪಾಲ್ಗೊಳ್ಳುವ ಮಂದಿ ಪಾಸ್ ಪಡೆದುಕೊಂಡು ಬರಬೇಕು.
ಮದುವೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ತಮ್ಮ ಐಡಿ ಕಾರ್ಡ್, ಇನ್ವಿಟೇಶನ್ ಕಾರ್ಡ್ ಮತ್ತು ಆಡಳಿತದಿಂದ ನೀಡಲಾಗುವ ಪಾಸ್ ಗಳನ್ನು ಹೊಂದಿರಬೇಕು. ಸ್ಥಳೀಯಾಡಳಿತದಿಂದ ನೀಡಿರುವ ಪಟ್ಟಿಯಲ್ಲಿ ಅವರ ಹೆಸರು ಇರಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರಕಾರದ ಜೊತೆ ಕೈಜೋಡಿಸಬೇಕು. ಕೋವಿಡ್ ಸೋಂಕನ್ನು ದೂರ ಮಾಡುವುದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಪ್ರಾರ್ಥನಾ ಕೇಂದ್ರಗಳಿಂದ ದೂರವಿದ್ದು ಸಹಕರಿಸಬೇಕು ಎಂದು ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನಾ ಮನವಿ ಮಾಡಿದ್ದಾರೆ.
Mangalore Bishop Peter Paul issues guidelines no church mass till May 4th only entry in catholic church for weddings and funerals during curfew.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm